WELCOME

ಈ ಬ್ಲಾಗಿನಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ನನ್ನ ಬರೆಹಗಳ ಜೆಪಿಜಿ ಪ್ರತಿಗಳನ್ನು ಹಂಚಿಕೊಳ್ಳತ್ತೇನೆ.














ಹುಡುಕಿ

Thursday, August 15, 2013

Q ಕೋಶ

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಪ್ರಶ್ನೋತ್ತರಗಳನ್ನೊಳಗೊಂಡ ವೆಬ್ ಸೈಟ್ ಗಾಗಿ ಕೆಳಗಿನ ಲಿಂಕ್ ಕ್ಲಿಕ್ಕಿಸಿ
.. Qಕೋಶ8910 ..:


Friday, July 12, 2013

'ಸುಭಾಷಿತ ಮಂಜರಿ'

ಇಂದು ಶಿವಮೊಗ್ಗದಲ್ಲಿ 'ಸುಭಾಷಿತ ಮಂಜರಿ' ಎಂಬ ಪುಸ್ತಕ ನೋಡಿದೆ. ಹಲವು ಸಂಸ್ಕೃತ ಗ್ರಂಥಗಳಿಂದ ಆರಿಸಿದ ಸುಭಾಷಿತಗಳಿಗೆ ಕನ್ನಡ ಅನುವಾದವನ್ನು ಕೊಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಿಸಿರುವ ಈ ಸಂಪಾದಿತ ಕೃತಿ 500 ಪುಟಗಳನ್ನು ಒಳಗೊಂಡಿದ್ದು ಬೆಲೆ 150 ರೂಪಾಯಿ. 

'ಅಮ್ಮ ಹೇಳಿದ ಎಂಟು ಸುಳ್ಳುಗಳು'

ಎ ಆರ್ ಮಣಿಕಾಂತ್ ಅವರ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಪುಸ್ತಕ ಓದಿದೆ. ಸ್ಫೂರ್ತಿದಾಯಕ ಅಂಕಣ ಬರಹಗಳ ಸಂಕಲನವಿದು. ಕೆಲವು ಲೇಖನಗಳು real incidentಗಳನ್ನು ಆಧರಿಸಿದ್ದರೆ, ಇನ್ನು ಕೆಲವು reel ಎನಿಸುತ್ತವೆ. ಕೆ ಎಸ್ ನರಸಿಂಹಸ್ವಾಮಿಯವರ "ರಾಯರು ಬಂದರು ಮಾವನ ಮನೆಗೆ" ಹಾಡಿನ ಕುರಿತಾದ ಲೇಖನ ಸೊಗಸಾಗಿದೆ. 150 ಪುಟಗಳ ಈ ಪುಸ್ತಕದ ಬೆಲೆ 90 ರೂಪಾಯಿಗಳು.

Sunday, July 7, 2013

'ಸೆರೆಯಲ್ಲಿ ಕಳೆದ ಹದಿನಾಲ್ಕು ದಿನಗಳು'

ಕೃಪಾಕರ ಸೇನಾನಿ ಅವರ 'ಸೆರೆಯಲ್ಲಿ ಕಳೆದ ಹದಿನಾಲ್ಕು ದಿನಗಳು' ಪುಸ್ತಕ ಓದಿದೆ. ವೀರಪ್ಪನ್ ಅವರನ್ನು ಅಪಹರಣ ಮಾಡಿದ ದಿನದ ವಿವರಗಳನ್ನು ಇಬ್ಬರೂ ನಿರೂಪಿಸಿದ್ದರೂ ಉಳಿದ ವಿವರಗಳನ್ನು ಕೃಪಾಕರ ಅವರೇ ನಿರೂಪಿಸಿದ್ದಾರೆ. ಬರೆವಣಿಗೆಯ ಶೈಲಿ ತೇಜಸ್ವಿಯವರ ಶೈಲಿಯನ್ನು ನೆನಪಿಸುತ್ತದೆ. ಪುಸ್ತಕ ಕಾದಂಬರಿಯಂತೆ ಓದಿಸಿಕೊಂಡು ಹೋಗುತ್ತದೆ. ಪುಸ್ತಕ ಪ್ರಕಾಶನದವರು ಪ್ರಕಟಿಸಿದ್ದಾರೆ.

Monday, June 17, 2013

ಪೂರ್ಣಚಂದ್ರ ತೇಜಸ್ವಿ

9-6-2013ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದ 2ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಾಚನ ಮಾಡಿದ ಕವನ

ಪೂರ್ಣಚಂದ್ರ ತೇಜಸ್ವಿ

ಪೂರ್ಣಚಂದ್ರನಿಗೆ ಎಷ್ಟೊಂದು ಕಳೆಗಳು!
ಬರೆವಣಿಗೆ, ಹೋರಾಟ, ಪರಿಸರ, ಬೇಟೆ,
ವಿಜ್ಞಾನ, ಫೋಟೋಗ್ರಫಿ, ಕಂಪ್ಯೂಟರ್, ಗ್ರಾಫಿಕ್ಸ್,...
ಒಂದೆ, ಎರಡೆ!
ಅಪ್ಪನ ಹಾದಿಯ ಬಿಟ್ಟು,
ತನ್ನದೇ ಜಾಡು ಹಿಡಿದು ಹೊರಟ.
ಆನೆ ನಡೆದದ್ದೇ ದಾರಿ!
ಇವ ಬಾಯಿ ತೆರೆದರೆ
ಪತ್ರಕರ್ತರಿಗೆ ಹಬ್ಬ!
ನೇರ ಮಾತು, ಹರಿತ ವಾಗ್ಬಾಣಗಳ ಸುರಿಮಳೆ!
ಪ್ರಶಸ್ತಿ ಸನ್ಮಾನಗಳಿಂದ ಮಾರು ದೂರ!
ಜನಜಂಗುಳಿಯಿಂದ ದೂರವಿದ್ದೂ
ಜನಮಾನಸಕ್ಕೆ ಹತ್ತಿರ!
ನಡುಮಧ್ಯಾಹ್ನ ಹೊಟ್ಟೆಬಿರಿಯೆ ಬಿರಿಯಾನಿ ತಿಂದು,
ನಡುಮನೆಯಿಂದ ಎದ್ದು ಹೇಳದೆ ಕೇಳದೆ ಹೊರಟೇಬಿಟ್ಟ!
ಸದಾ ಬೆರಗು ಹುಟ್ಟಿಸುವ ಸುತ್ತಣ ಮಾಯಾಲೋಕವ ಬಿಟ್ಟು,
ಇನ್ನೊಂದು ಮಾಯಾಲೋಕವ ಅರಸುತ್ತ ಹೊರಟನೆ?
ನಮ್ಮೆಲ್ಲ ಪ್ರಶ್ನೆಗಳಿಗೆ ಉಳಿದದ್ದು ನಿರುತ್ತರ!
ಇವ ಸೃಷ್ಟಿಸಿದ ಪಾತ್ರಗಳು
ನಮ್ಮ ನಡುವೆ ಇನ್ನೂ ಜೀವಂತ.

ಕ್ರಿಯಾ ಸಂಶೋಧನೆ

ನಾನು 2003-04ರಲ್ಲಿ ನಡೆಸಿದ ಕ್ರಿಯಾ ಸಂಶೋಧನೆಯ ವರದಿಯನ್ನು ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
https://issuu.com/gnaneswara/docs/my_action_research/19?e=0

Wednesday, June 5, 2013

Teachers of India

ಶಿಕ್ಷಕರಿಗೆ ಉಪಯುಕ್ತ ವೆಬ್ ಸೈಟ್ 'Teachers of India'ಗಾಗಿ ಕೆಳಗಿನ ಲಿಂಕ್ ಕ್ಲಿಕ್ಕಿಸಿ.
ತರಗತಿ ಸಂಪನ್ಮೂಲ | Teachers of India:


Monday, March 18, 2013

ಬಿಡು ಬಾಹ್ಯದೊಳು ಡಂಭವ

ಬಿಡು ಬಾಹ್ಯದೊಳು ಡಂಭವ
ಮಾನಸದೊಳು ಎಡೆಬಿಡದಿರು ಶಂಭುವ.
ಮನದೊಳು ವಂಚಿಸಿ ಹೊರಗೆ ನೀ ಕೀರ್ತಿಯ
ಪಡೆದರೆ ಶಿವ ನಿನಗೊಲಿಯನು ಮರುಳೆ.

ಜನಕಂಜಿ ನಡೆಕೊಂಡರೇನುಂಟು ಲೋಕದಿ
ಮನಕಂಜಿ ನಡೆಕೊಂಬುದೇ ಚಂದ.
ಜನರೇನ ಬಲ್ಲರು ಒಳಗಾಗೋ ಕೃತ್ಯವ
ಮನವರಿಯದ ಕಳ್ಳತನವಿಲ್ಲವಲ್ಲ.

ಮನದಲಿ ಶಿವ ತಾ ಮನೆಮಾಡಿಕೊಂಡಿಹ
ಮನಮೆಚ್ಚಿ ನಡೆದರೆ ಶಿವ ತಾ ಮೆಚ್ಚುವ.
ಮನಕಂಜಿ ನಡೆಯದೆ ಜನಕಂಜಿ ನಡೆದರೆ
ಮನದಾಣ್ಮ ಗುರುಸಿದ್ಧ ಮರೆಯಾಗೋನಲ್ಲ.

-ಸರ್ಪಭೂಷಣ ಶಿವಯೋಗಿಗಳು

Sunday, March 17, 2013

ಉಪನಿಷತ್ತುಗಳು - ಮ್ಯಾಕ್ಸ್ ಮುಲ್ಲರ್ ಅನುವಾದ

ಮ್ಯಾಕ್ಸ್ ಮುಲ್ಲರ್ ಅವರ ುಪನಿಷತ್ತುಗಳ ಅನುವಾದವನ್ನು ಡೌನ್ ಲೋಡ್ ಮಾಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
The Upanishads, Part 1 (SBE01) Index:


Monday, March 11, 2013

ಆಧುನಿಕ ಭಾರತದ ಶಿಕ್ಷಣ ಮಾತೆ


“ನಿಜವಾಗಿ ನೋಡಿದರೆ ಈ ಅಭಿನಂದನೆ ನಿನಗೆ ಸಲ್ಲತಕ್ಕದ್ದು. ನಾನು ಕೇವಲ ಬೇರೆ ಬೇರೆ ಕಡೆ ಶಾಲೆಗಳನ್ನು ಪ್ರಾರಂಭಿಸಲು ಕಾರಣಕರ್ತ. ಆದರೆ ನೀನು ಮಾತ್ರ ಶಾಲೆಗಳ ಬೆಳವಣಿಗೆಯ ಹಾದಿಯಲ್ಲಿ ಎದುರಾದ ಎಲ್ಲ ಸಂಕಷ್ಟಗಳನ್ನು ಧೈರ್ಯದಿಂದ ಎದುರಿಸಿರುವೆ. ಅದರಿಂದಾಗಿ ಬಂದಂತಹ ಬಹುಪರಿಯ ದುಃಖಗಳನ್ನು ನುಂಗಿಕೊಳ್ಳುತ್ತಾ ಪ್ರತಿಯೊಂದು ಶಾಲೆಗೂ ಹೊಸ ರೂಪ ಮತ್ತು ಚೈತನ್ಯವನ್ನು ತುಂಬಿರುವೆ. ಅದಕ್ಕಾಗಿ ಇದೋ ನನ್ನ ಮನಃಪೂರ್ವಕ ಅಭಿನಂದನೆಗಳು” ಎನ್ನುತ್ತಾ ಸ್ವಇಚ್ಛೆಯಿಂದ ಶಿಕ್ಷಣ ಕೇಂದ್ರಗಳನ್ನು ತೆರೆದು ವಿದ್ಯಾ ದಾನ ಮಾಡಿದ ತಮಗೆ, ಬ್ರಿಟಿಷ್ ಸರ್ಕಾರ ಹೊದಿಸಿ ಗೌರವಿಸಿದ ಶಾಲನ್ನು ಮಹಾತ್ಮ ಜ್ಯೋತಿಬಾ ಫುಲೆ ತಮ್ಮ ಮಡದಿಗೆ ನೀಡಿದಾಗ, ಇಡೀ ಸಭೆಗೆ ಸಭೆಯೇ ಎದ್ದು ನಿಂತು, ಸಮರ್ಥ ಶಿಕ್ಷಕಿ, ದೇಶದ ಮೊದಲ ಮಹಿಳಾ ಶಿಕ್ಷಣತಜ್ಞೆಗೆ ಕರತಾಡನದೊಂದಿಗೆ ಗೌರವ ಸೂಚಿಸಿತು. ಹೀಗೆ ಪತಿಯಿಂದ ಸಾಮಾಜಿಕವಾಗಿ ಪ್ರಶಂಸೆ ಮತ್ತು ಗೌರವವನ್ನು ಪಡೆದ ಧೀಮಂತ ಮಹಿಳೆ, ತಾಯಿ ಸಾವಿತ್ರಿಬಾಯಿ ಫುಲೆ!

ತಳಸಮುದಾಯ ಹಾಗೂ ಹೆಣ್ಣುಮಕ್ಕಳು ಮೇಲ್ಜಾತಿಗೆ ಸಮಾನವಾದ ಶಿಕ್ಷಣ ಪಡೆಯಬೇಕೆಂಬ ಕನಸನ್ನು 19ನೇ ಶತಮಾನದ ಪ್ರಾರಂಭದಲ್ಲೇ ಕಂಡು ಅದರ ಸಾಕಾರಕ್ಕಾಗಿ ಅನೇಕ ನೋವು, ಅಪಮಾನ, ಸಂಕಟಗಳನ್ನು ಅನುಭವಿಸಿದ ಮಹಿಳೆ, ನಾವೆಲ್ಲರೂ ಕೃತಜ್ಞರಾಗಿರಬೇಕಾದ ತಾಯಿ ಸಾವಿತ್ರಿಬಾಯಿ ಫುಲೆ. ಇಂದು ತಳ ಸಮುದಾಯಗಳು ಹಾಗೂ ಮಹಿಳೆಯರು ಒಂದಿಷ್ಟಾದರೂ ಮುಕ್ತವಾಗಿ ವಿದ್ಯಾಭ್ಯಾಸ ಪಡೆಯುವಂತೆ ಆಗಿರುವುದರ ಹಿಂದೆ ಅವರ ಬಹು ದೊಡ್ಡ ಹೋರಾಟವೇ ಇದೆ.

ಒಂದೆಡೆ ಬ್ರಿಟಿಷ್ ಸಾಮ್ರಾಜ್ಯದ ಪ್ರಾಬಲ್ಯ, ಇನ್ನೊಂದೆಡೆ ತಲೆತಲಾಂತರದಿಂದ ಬಂದ ಪರಂಪರೆಯಂತೆ, ಹಿಂದೂ ಮೇಲ್ಜಾತಿಗಳು ಜಾತಿ-ದೇವರುಗಳ ಹೆಸರಿನಲ್ಲಿ ತಳಸಮುದಾಯಗಳನ್ನು ತುಳಿಯುತ್ತಿದ್ದ ಕಾಲ. ಹೆಣ್ಣುಮಕ್ಕಳಿಗೆ ಶಿಕ್ಷಣದ ಹಕ್ಕಿಲ್ಲದೆ, ವಿದ್ಯೆ ಪಡೆಯುವುದೇ ಮಹಾ ಪಾಪವೆಂಬಂತಿದ್ದ ಸಂದರ್ಭ. ಹೆಣ್ಣಿಗೆ ಮದುವೆಯೊಂದೇ ಅಂತಿಮ. ಅವಳೇನೂ ಹೇಳುವಂತಿಲ್ಲ. ಕೇಳುವಂತಿಲ್ಲ. ಇಂತಹ ಸಂದರ್ಭದಲ್ಲಿ ಜ್ಯೋತಿಬಾ ಫುಲೆ ದಂಪತಿಗಳು ಹೆಣ್ಣು ಮಕ್ಕಳಲ್ಲಿ ಹತ್ತಿಸಿದ ಶಿಕ್ಷಣದ ಅರಿವಿನ ಕಿಡಿ ಇಂದು ಬೆಳಕಾಗಿ ಪಸರಿಸುತ್ತಿದೆ.

ಮಹಾರಾಷ್ಟ್ರದ ಸತಾರ ಜಿಲ್ಲೆಯ ನಾಯಗಾಂವ ಎಂಬ ಹಳ್ಳಿಯಲ್ಲಿ 3ನೇ ಜನವರಿ 1831ರಲ್ಲಿ ತಳಸಮುದಾಯದ ಕುಟುಂಬವೊಂದರಲ್ಲಿ ಜನಿಸಿದ ಸಾವಿತ್ರಿಬಾಯಿಗೆ 9 ವರ್ಷವಾಗಿದ್ದಾಗಲೇ ಜ್ಯೋತಿಬಾ ಅವರೊಂದಿಗೆ ವಿವಾಹವಾಯಿತು. ಮದುವೆಯ ನಂತರ ಅವರು ಪುಣೆಗೆ ಬಂದರು. ಹಸುಗೂಸಾಗಿದ್ದಾಗಲೇ ತಾಯಿಯನ್ನು ಕಳೆದುಕೊಂಡಿದ್ದ ಜ್ಯೋತಿಬಾ ಅವರ ವಿದ್ಯಾಭ್ಯಾಸ ಕುಂಟುತ್ತಾ ಸಾಗಿತ್ತು. ತಾಯಿಯ ದೂರದ ಸಂಬಂಧಿಯಾಗಿದ್ದ ಬಾಲವಿಧವೆ ಸಗುಣಾಬಾಯಿ ಇವರ ಸಾಕುತಾಯಿ.

ಸಗುಣಾ ಅವರಿಗೆ ಶಿಕ್ಷಣದ ಬಗ್ಗೆ ಅಪರಿಮಿತ ಆಸಕ್ತಿ ಇತ್ತು. ಇವರು ಸಂಪ್ರದಾಯ, ಕಟ್ಟುಕಟ್ಟಲೆಗಳ ಕುರಿತು ಆಳದಲ್ಲಿ ಪ್ರತಿಭಟನಾತ್ಮಕ ಮನೋಭಾವ ಹೊಂದಿದ್ದರು. ಹೀಗೆಂದೇ ಸಾವಿತ್ರಿಬಾಯಿ ಹಾಗೂ ತಮಗೆ ಪಾಠವನ್ನು ಹೇಳಿಕೊಡಲು ಜ್ಯೋತಿಬಾ ಅವರನ್ನೇ ಒಪ್ಪಿಸಿದರು! ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ವಿದ್ಯೆಯನ್ನು ದಕ್ಕಿಸಿಕೊಂಡ ಈ ಇಬ್ಬರು ಹೆಣ್ಣುಮಕ್ಕಳು ಜ್ಯೋತಿಬಾ ಅವರೊಡಗೂಡಿ, ಬಹುಜನರಿಗೆ ಅಕ್ಷರವನ್ನು ನಿರಾಕರಿಸಿದ್ದ ರೋಗಗ್ರಸ್ತ ಸಮಾಜವನ್ನು ಎದುರು ಹಾಕಿಕೊಂಡು ಹೆಣ್ಣುಮಕ್ಕಳಿಗೆ ಹಾಗೂ ತಳ ಸಮುದಾಯದವರಿಗೆ ಶಿಕ್ಷಣದ ಬಾಗಿಲನ್ನು ತೆರೆದರು!

1847ರಲ್ಲಿ ನಾರ್ಮನ್ ಶಾಲೆಯಲ್ಲಿ ಕೇವಲ 17 ವರ್ಷದೊಳಗೆ ಶಿಕ್ಷಕಿ ತರಬೇತಿಯನ್ನು ಪಡೆದ ಸಾವಿತ್ರಿಬಾಯಿ ಅವರು ಮಹಾರಾಷ್ಟ್ರದಲ್ಲಿ ತರಬೇತಾದ ಮೊದಲ ಮಹಿಳಾ ಶಿಕ್ಷಕಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 1848ರಲ್ಲಿ ಜ್ಯೋತಿಬಾ ಅವರು ಪುಣೆಯಲ್ಲಿ ತೆರೆದ ಮೊಟ್ಟಮೊದಲ ಹೆಣ್ಣುಮಕ್ಕಳ ಶಾಲೆಯಲ್ಲಿ (ಭಾರತದಲ್ಲಿ ಎರಡನೆಯದು) ಮುಖ್ಯೋಪಾಧ್ಯಾಯಿನಿಯಾಗಿ ಕೆಲಸ ಪ್ರಾರಂಭಿಸಿದರು. ಮೇಲ್ಜಾತಿ, ತಳಸಮುದಾಯಕ್ಕೆ ಸೇರಿದ 9 ಜನ ಹೆಣ್ಣುಮಕ್ಕಳಿಂದ ಪ್ರಾರಂಭವಾದ ಶಾಲೆ, ಮುಂದೆ ಅನೇಕ ಬಾಲೆಯರಿಗೆ ವಿದ್ಯಾದಾನದ ಕೇಂದ್ರವಾಯ್ತು.

ಆ ಕಾಲದಲ್ಲಿ ಬ್ರಾಹ್ಮಣ ಪುರುಷರ ಹೊರತಾಗಿ ಬೇರೆಯವರಿಗೆ ಅಕ್ಷರ ಕಲಿಯುವ ಅವಕಾಶ ಕಡಿಮೆಯಿತ್ತು. ಅಂಥ ಸಂದರ್ಭದಲ್ಲಿ ಹೆಣ್ಣೊಬ್ಬಳು ಶಾಲೆಗೆ ಹೋಗಿ ವಿದ್ಯಾಭ್ಯಾಸ ಪಡೆದು ಶಿಕ್ಷಕಿಯಾಗಿ, ಉಚಿತ ವಿದ್ಯಾದಾನ ನೀಡಲಾರಂಭಿಸಿದ್ದು ಸಂಪ್ರದಾಯಸ್ಥ ಮೇಲ್ಜಾತಿಯವರಿಗೆ ನುಂಗಲಾರದ ತುತ್ತಾಯಿತು. ಸಾವಿತ್ರಿಬಾಯಿಯವರು ಶಾಲೆಗೆ ಹೋಗಿ ಬರುವ ದಾರಿಯಲ್ಲಿ ಅವರನ್ನು ಕೆಟ್ಟ ಶಬ್ದಗಳಿಂದ ನಿಂದಿಸಲಾಯಿತು. ಕಲ್ಲು, ಕೆಸರು, ತೊಪ್ಪೆಗಳನ್ನೆಸೆದು ಹೆದರಿಸಿ, ಕೊಲೆ ಬೆದರಿಕೆ ಹಾಕಿದರು. ಯಾವುದಕ್ಕೂ ಬಗ್ಗದಿದ್ದಾಗ, ಇವರ ಶಾಲೆಗೆ ಸೇರಿದ್ದ ಹೆಣ್ಣುಮಕ್ಕಳಿಗೆ ಜಾತಿ ಹಾಗೂ ಸಮಾಜ ಬಹಿಷ್ಕಾರದ ಬೆದರಿಕೆಯನ್ನು ಹಾಕತೊಡಗಿದರು. ಸಾವಿತ್ರಿಬಾಯಿ ಮನೆ ಮನೆಗಳಿಗೆ ಹೋಗಿ ಪೋಷಕರ ಮನವೊಲಿಸಿ, ಶಿಕ್ಷಣದ ಔನ್ನತ್ಯವನ್ನು ತಿಳಿ ಹೇಳಿ ಮಕ್ಕಳನ್ನು ಮರಳಿ ಶಾಲೆಗೆ ಕರೆತಂದು ಶಿಕ್ಷಣ ನೀಡಿದರು. ಹೀಗೆ ನಿಜವಾದ ಅರ್ಥದಲ್ಲಿ ಆಧುನಿಕ ಭಾರತದ ಶಿಕ್ಷಣ ಮಾತೆಯಾದರು.

ಇದೇ ಕಾರಣಕ್ಕೆ ಜ್ಯೋತಿಬಾ ತಮ್ಮ ಸ್ವಂತ ಮನೆ ತೊರೆದು ಹೊರಬೀಳಬೇಕಾದ, ಸಾವಿತ್ರಿಬಾಯಿಯವರು ತವರಿನಿಂದ ಬಹಿಷ್ಕಾರಕ್ಕೆ ಒಳಗಾಗಬೇಕಾದ ಪ್ರಸಂಗಗಳು ಎದುರಾದವು. ಇದನ್ನೆಲ್ಲಾ ಕೆಲವು ಪ್ರಗತಿಪರ ಸ್ನೇಹಿತರೊಡಗೂಡಿ ದಿಟ್ಟವಾಗಿ ಎದುರಿಸಿದ ದಂಪತಿಗಳು 1848-1852ರವರೆಗೆ ಹದಿನೆಂಟಕ್ಕೂ ಹೆಚ್ಚು ಉಚಿತ ಶಾಲೆಗಳನ್ನು ತೆರೆದು ಸಾವಿರಾರು ಹೆಣ್ಣುಮಕ್ಕಳು ಹಾಗೂ ತಳಸಮುದಾಯದ ಮಕ್ಕಳಿಗೆ ಶಿಕ್ಷಣ ನೀಡಿದ ದಾಖಲೆಗಳಿವೆ.

ಈ ಎಲ್ಲ ಶಾಲೆಗಳ ಆಡಳಿತ ಜವಾಬ್ದಾರಿಯನ್ನು ಹೊತ್ತು, ನಿರಂತರವಾದ ಸಾಮಾಜಿಕ ಸಂಘರ್ಷಕ್ಕೆ ಈಡಾಗಿಯೂ ಉತ್ತಮ ಶಿಕ್ಷಣತಜ್ಞೆಯಾಗಿ, ಯಶಸ್ವಿ ಮುಖ್ಯೋಪಾಧ್ಯಾಯಿನಿಯಾಗಿ ಕಾರ್ಯನಿರ್ವಹಿಸಿದ್ದು ಇತಿಹಾಸ ಗರ್ಭದಲ್ಲಿ ಹೂತುಹೋಗಿದೆ. ಕ್ರಾಂತಿಕಾರಿ ಕವಿಯಾಗಿ ಹೋರಾಟದ ಹಾಡುಗಳನ್ನು ರಚಿಸಿದ ಸಾವಿತ್ರೀ ಬಾಯಿ ಅವರ ತೀವ್ರವಾದ ತುಡಿತ ಸಮಾನ ಶಿಕ್ಷಣದ ಕಡೆಗಿದ್ದುದು ಅವರ ಈ ಕವಿತೆಯಿಂದ ಗೋಚರವಾಗುತ್ತದೆ.

ನಡೆ! ಶಿಕ್ಷಣ ಪಡೆ!

ನಿಲ್ಲು! ನಿನ್ನ ಕಾಲ ಮೇಲೆ ನೀನು ನಿಲ್ಲು

ಪಡೆ ವಿವೇಕ! ಪಡೆ ಸಂಪತ್ತು! ಇದಕಾಗಲಿ ನಿನ್ನಯ ದುಡಿಮೆ
ಅರಿವಿಲ್ಲದವರಾಗಿ ನಮಗೆ ಕೈ ಜಾರಿತು ಸಕಲವೂ ಪಶುವಾದೆವು, ಇಲ್ಲದಾಗಿ ವಿವೇಕವೂ
ಸಾಕಿನ್ನು ಈ ಜಡತೆ ಸಾಕು

ನಡೆನಡೆ ಶಿಕ್ಷಣ ಪಡೆ!
ಆಗಲಿ ಕೊನೆ, ದಮನಿತರ ಕಣ್ಣೀರ ಸಂಕಟಕ್ಕೂ ಕೊನೆ
ಇದೊ ಇಲ್ಲಿದೆ! ನಿಮ್ಮ ಕಣ್ಮುಂದೆಯೆ ಬಿದ್ದಿದೆ

ಶಿಕ್ಷಣದ ರೂಪದಲಿ ಚಿನ್ನದ ಗಣಿಯು
ತಡವೇಕೆ? ನಡೆನಡೆ ಶಿಕ್ಷಣ
ಪಡೆ!

ಜಾತಿಯ ಸಂಕೋಲೆ ಕತ್ತರಿಸಿ ನಡೆ.

ವೈದಿಕ ಶಾಸ್ತ್ರದ ಕಾಲ್ತೊಡರ ಕಿತ್ತೆಸೆದು ನಡೆ ನಡೆ!

ಅನೇಕ ಸಾಮಾಜಿಕ ಅನಿಷ್ಟಗಳ ಎದುರಿಗೂ ಫುಲೆ ದಂಪತಿಗಳು ಉಗ್ರ ಹೋರಾಟ ನಡೆಸಿದರು. ಹೆಣ್ಣುಮಕ್ಕಳೆಡೆಗೆ ಒಂದು ಸರ್ಕಾರ ವಹಿಸಬಹುದಾದ ಸೂಕ್ಷ್ಮ ಎಚ್ಚರ, ಕಾಳಜಿಗಳನ್ನು ಅವರು ಪ್ರಜ್ಞಾಪೂರ್ವಕವಾಗಿ ನಿರ್ವಹಿಸಿದರು. ವಿಧವೆಯರ ಕೇಶಮುಂಡನವನ್ನು ವಿರೋಧಿಸಿ, ಅವರ ಪುನರ್ ವಿವಾಹಗಳನ್ನು ಏರ್ಪಡಿಸಿದರು.

ಕಾಮುಕ ಪುರುಷರಿಗೆ ಬಲಿಯಾಗಿ ಗರ್ಭಧರಿಸುವ ವಿಧವೆಯರಿಗಾಗಿ, ಅವರಿಗೆ ಹುಟ್ಟುವ ಮಕ್ಕಳಿಗಾಗಿ 1863ರಲ್ಲಿ `ಬಾಲಹತ್ಯೆ ಪ್ರತಿಬಂಧಕ ಗೃಹ'ಗಳನ್ನು ತೆರೆದರು. ಅನಾಥ ವಿಧವೆಯರ ಸುರಕ್ಷಿತ ಹೆರಿಗೆಗಾಗಿ `ಗುಪ್ತ ಪ್ರಸೂತಿ ಗೃಹ'ಗಳನ್ನು ಸ್ಥಾಪಿಸಿದರು. ಅನೇಕ ಅನಾಥಾಶ್ರಮಗಳೂ ಸ್ಥಾಪನೆಯಾದವು.

ಸ್ವಂತ ಮಕ್ಕಳನ್ನು ಹೊಂದದೆಯೇ ಈ ದಂಪತಿಗಳು ಅನಾಥ ಮಕ್ಕಳನ್ನು ತಮ್ಮ ಮಕ್ಕಳಂತೆಯೇ ಸಾಕಿ ಬೆಳೆಸಿದರು. ಬಾಲ್ಯ ವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದರು. ಅವರು ರೂಪಿಸಿದ `ಸತ್ಯಶೋಧಕ ಚಳವಳಿ' ಸಾಮಾಜಿಕ ಪಿಡುಗುಗಳ ವಿರುದ್ಧದ ಒಂದು ಅಸ್ತ್ರವೇ ಆಗಿತ್ತು. ದೇಶದಲ್ಲೇ ಪ್ರಥಮ ಬಾರಿಗೆ ಮಹಿಳಾ ಸೇವಾ ಮಂಡಳಿಯೊಂದನ್ನು ಸಾವಿತ್ರಿಬಾಯಿಯವರ ನಾಯಕತ್ವದಲ್ಲಿ ಸ್ಥಾಪಿಸಿದ್ದೂ ಒಂದು ದಾಖಲೆ.

ಜ್ಯೋತಿಬಾ ಫುಲೆಯವರ ಮರಣದ ನಂತರವೂ ಇಷ್ಟೆಲ್ಲಾ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ದಿಟ್ಟೆ ಸಾವಿತ್ರಿಬಾಯಿ ಫುಲೆಯವರನ್ನು ನಾವಿಂದು ಮರೆತು ಹೋಗಿದ್ದೇವೆಂಬುದೇ ವಿಪರ್ಯಾಸ. ವ್ಯಾಪಕವಾಗಿ ಹರಡಿದ್ದ ಪ್ಲೇಗ್ ಕಾಯಿಲೆಗೆ ತುತ್ತಾದ ರೋಗಿಗಳ ಸೇವೆಯಲ್ಲಿ ಅವರು ನಿಸ್ವಾರ್ಥವಾಗಿ ತೊಡಗಿಕೊಂಡು, ನಿರ್ಗತಿಕರಿಗಾಗಿ ಗಂಜಿ ಕೇಂದ್ರಗಳನ್ನು ಸ್ಥಾಪಿಸಿದರು. ಕ್ಷಾಮದ ಸಂದರ್ಭದಲ್ಲಿ ಹೆಣ್ಣುಮಕ್ಕಳು ದೇಹ ಮಾರಿಕೊಳ್ಳುವುದನ್ನು ತಪ್ಪಿಸಿ ಘನತೆಯಿಂದ ಬದುಕಲು ದಾರಿಗಳನ್ನು ಹುಡುಕಿಕೊಟ್ಟರು. ಕೊನೆಗೆ ಈ ನಮ್ಮ ಶಿಕ್ಷಣದ ತಾಯಿ ತೀವ್ರ ಪ್ಲೇಗ್ ಖಾಯಿಲೆಗೆ ತುತ್ತಾಗಿ ತಮ್ಮ 66ನೇ ವಯಸ್ಸಿನಲ್ಲಿ, 10 ಮಾರ್ಚ್ 1897ರಲ್ಲಿ ಸಾವನ್ನಪ್ಪಿದರು.
ಸಮಾನ ಶಿಕ್ಷಣ, ಸಮ ಸಮಾಜದ ಕನಸು ಕಂಡ ಫುಲೆ ದಂಪತಿಗಳು ಇನ್ನಿಲ್ಲವಾಗಿ ಶತಮಾನವೇ ಕಳೆದುಹೋದರೂ ಅವರ ಕನಸು ಇಂದಿಗೂ ಕನಸಾಗಿಯೇ ಉಳಿದಿದೆ! ಜಾಗತೀಕರಣದ ಬಿರುಗಾಳಿ ಮತ್ತು ಉಳ್ಳವರ ಪರವಾದ ಶೈಕ್ಷಣಿಕ ನೀತಿಗಳಿಂದಾಗಿ ಮಹಿಳೆ ಮತ್ತು ತಳ ಸಮುದಾಯ ಇಂದಿಗೂ ಸಮಾನ ಶಿಕ್ಷಣವನ್ನು ಪಡೆಯಲಾಗದೇ ಶಿಕ್ಷಣದ ಹಕ್ಕಿನಿಂದ ವಂಚನೆಗೊಳಗಾಗುತ್ತಿದೆ. ಸಮಾನತೆಯನ್ನು ಸಾಧಿಸಲು ಸಮಾನ ಶಿಕ್ಷಣ ವ್ಯವಸ್ಥೆಯೊಂದು ಪ್ರಬಲ ಅಸ್ತ್ರ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂದು `ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ'ಯನ್ನು ಅಳವಡಿಸಿಕೊಳ್ಳುತ್ತಿರುವ ಬಗ್ಗೆ ಹೆಮ್ಮೆಪಡುತ್ತಿವೆ. ಆದರೆ ಸಮಾನ ಶಿಕ್ಷಣದ ಜಾರಿಗೆ ಬೇಕಾದಂತಾ ಇಚ್ಛಾಶಕ್ತಿಯ ಕೊರತೆಯಿಂದ ಮನಬಂದಂತೆ ಶಿಕ್ಷಣ ನೀತಿಯನ್ನು ರೂಪಿಸಿಕೊಂಡು, ಶಿಕ್ಷಣ ಖಾಸಗೀಕರಣಕ್ಕೆ ತನ್ನನ್ನು ಒತ್ತೆ ಇಟ್ಟುಕೊಂಡು, ವಿದ್ಯೆಯೆಂಬ ಮೂಲಭೂತ ಹಕ್ಕನ್ನೂ ಮಾರಾಟದ ಸರಕಾಗಿಸಿದೆ. ತಾಯ್ತನದ ತುಡಿತವಿರದ ಲಾಭಕೋರ ಸರ್ಕಾರ, ಸರ್ಕಾರಿ ಶೈಕ್ಷಣಿಕ ವ್ಯವಸ್ಥೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಾ ಶಾಲೆಗಳನ್ನೇ ಮುಚ್ಚುತ್ತಿದೆ.

ಸಾವಿತ್ರಿಬಾಯಿಯವರ ಅಂದಿನ ಶ್ರಮ ಸಾರ್ಥಕವಾಗಬೇಕಾದರೆ ಪ್ರಾದೇಶಿಕ ಭಾಷೆಯನ್ನು ಪ್ರಾಥಮಿಕ ಹಂತದಲ್ಲಾದರೂ ಮಾಧ್ಯಮವಾಗುಳ್ಳ ಸಮಗ್ರ ಏಕರೂಪ ರಾಷ್ಟ್ರೀಯ ಶಿಕ್ಷಣ ನೀತಿಯೊಂದನ್ನು ಜಾರಿಗೆ ತರಲು ಸರ್ಕಾರದ ಮೇಲೆ ಒತ್ತಡ ಹೇರಲೇಬೇಕಾಗಿದೆ. ಅದರ ಮೊದಲ ಭಾಗವಾಗಿ ಸರ್ಕಾರ, ಸಾವಿತ್ರಿಬಾಯಿಯವರು ಜನಿಸಿದ ಜನವರಿ 3ನ್ನು `ರಾಷ್ಟ್ರೀಯ ಸಮಾನ ಶಿಕ್ಷಣ ದಿನ'ವೆಂದು ಘೋಷಿಸಬೇಕು.

ಈ ಘೋಷಣೆ ಭಾರತದ ಕಗ್ಗತ್ತಲೆಗೆ ಬೆಳಕಾದ ತಾಯಿಯೊಬ್ಬಳ ದಿನಾಚರಣೆ ಆಗುತ್ತದೆ. ಅಂದು ಮಾಮೂಲಿನಂತೆ ಸಾರ್ವತ್ರಿಕ ರಜೆಯನ್ನೇನೂ ಸರ್ಕಾರ ನೀಡುವುದು ಬೇಡ. (ಹೆಣ್ಣುಮಕ್ಕಳಿಗೆ ಯಾವ ರಜಾ ದಿನಗಳಲ್ಲೂ, ನಿವೃತ್ತಿಯ ನಂತರವೂ ಬಿಡುವೆಂಬುದಿರುವುದೇ ಇಲ್ಲ). ಆ ದಿನದಂದು `ಸಮಾನ ಶಿಕ್ಷಣ'ದ ಕುರಿತು ಸರ್ಕಾರ ಮತ್ತು ಇತರ ಪ್ರಗತಿಪರ ಸಂಸ್ಥೆಗಳು ಚರ್ಚೆ, ಕಾರ್ಯಾಗಾರ, ಸಂವಾದ, ವಿಚಾರ ಸಂಕಿರಣಗಳನ್ನು ನಡೆಸಬೇಕಾಗಿದೆ.

 -ರೂಪ ಹಾಸನ
ಕೃಪೆ: ಪ್ರಜಾವಾಣಿ

ಆರ್ಯಾಂಬ ಪಟ್ಟಾಭಿ

ಕನ್ನಡದ ಪ್ರಖ್ಯಾತ ಬರಹಗಾರ್ತಿ ಆರ್ಯಾಂಬ ಪಟ್ಟಾಭಿ ಅವರು 1936ರ ಮಾರ್ಚ್ 12ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ. ಎಂ. ಶ್ರೀ ಅವರ ತಮ್ಮಂದಿರಾದ ಬಿ.ಎಂ.ಕೃಷ್ಣಸ್ವಾಮಿಯವರು. ತಾಯಿ ತಂಗಮ್ಮನವರು. ಪ್ರಾರಂಭಿಕ ಶಿಕ್ಷಣವನ್ನು ಮಂಡ್ಯದಲ್ಲಿ ಮತ್ತು ಕಾಲೇಜು ವಿದ್ಯಾಭ್ಯಾಸವನ್ನು ಮೈಸೂರಿನಲ್ಲಿ ಪಡೆದ ಆರ್ಯಾಂಬ ಅವರು ಬಿ.ಎ. ಪದವಿ ಹಾಗೂ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಬಾಲ್ಯದಿಂದಲೇ ಓದುವ ಹವ್ಯಾಸವನ್ನು ರೂಢಿಸಿಕೊಂಡಿದ್ದು, ಹೈಸ್ಕೂಲಿನಲ್ಲಿದ್ದಾಗಲೇ ಲೇಖನಗಳು, ಕಥೆಗಳ ಬರವಣಿಗೆ ಪ್ರಾರಂಭ ಮಾಡಿದ್ದ ಆರ್ಯಾಂಬ ಅವರು ಶಾಲಾ ಕಾಲೇಜುಗಳಲ್ಲಿ ತಮ್ಮ ಬರಹಗಳಿಗಾಗಿ ಅನೇಕ ಬಹುಮಾನಗಳನ್ನೂ ಗಳಿಸುತ್ತ ಬಂದು, ಮುಂದೆ ಹಲವಾರು ಕಥೆಗಳನ್ನು ಪತ್ರಿಕೆಗಳಲ್ಲಿ ಪ್ರಕಟಪಡಿಸಿದರು. ಅಕ್ಕನಾದ ತ್ರಿವೇಣಿಯವರು ಹಲವಾರು ಕಾದಂಬರಿಗಳನ್ನು ಬರೆದು ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ತಂಗಿಯಾದ ಇವರಿಗೂ ಕಾದಂಬರಿ ಬರೆಯಲು ಪ್ರೇರೇಪಿಸಿದಾಗ, ಇವರು ಬರೆದ ಮೊದಲ ಕಾದಂಬರಿಯನ್ನು ಓದಿದ ತ್ರಿವೇಣಿಯವರೇ ‘ಹೊಂಗನಸು’ ಎಂದು ನಾಮಕರಣ ಮಾಡಿ ಪ್ರಕಟಣೆಗೂ ನೆರವಾದರು. “ಬೃಹತ್ ಕಾದಂಬರಿಯನ್ನು ಬರೆಯಬೇಡ, ಬರವಣಿಗೆಯನ್ನು ಎಂದೂ ನಿಲ್ಲಿಸಬೇಡ, ಓದುಗರ ಪ್ರೀತಿ-ಅಭಿಮಾನವೇ ಸಾಹಿತಿಗಳಿಗೆ ಶ್ರೀರಕ್ಷೆ” ಇದು ಅಕ್ಕ ತ್ರಿವೇಣಿ ಇವರಿಗೆ ಹೇಳಿದ ಕಿವಿಮಾತು. ಅವರಿರುವಾಗಲೇ ಮೂರು ಕಾದಂಬರಿ ಬರೆದು ಪ್ರಕಟಿಸಿದ್ದರು.

‘ಹೊಂಗನಸು’ ಪ್ರಕಟವಾದದ್ದು 1961ರಲ್ಲಿ. ನಂತರ ಆರಾಧನೆ, ಪ್ರಿಯಸಂಗಮ, ಎರಡುಮುಖ, ಬೀಸಿದ ಬಲೆ ಮುಂತಾದ 34 ಕಾದಂಬರಿಗಳು ಪ್ರಕಟಗೊಂಡಿವೆ. ಕಪ್ಪು-ಬಿಳುಪು ಕಾದಂಬರಿಯು ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ಚಲನಚಿತ್ರವಾಗಿದೆ. ಇದಲ್ಲದೆ ಎರಡು ಮುಖ, ಮರಳಿಗೂಡಿಗೆ, ಸವತಿಯ ನೆರಳು, ಕನ್ನಡ ಚಲನ ಚಿತ್ರಗಳಾಗಿವೆ. ಎರಡುಮುಖ ಮತ್ತು ಮರಳಿಗೂಡಿಗೆ ಚಲನಚಿತ್ರಗಳು ರಾಜ್ಯಪ್ರಶಸ್ತಿ ಪಡೆದ ಚಿತ್ರಗಳಾಗಿವೆ. ಇವರು ಬರೆದ ಹಲವಾರು ಕಥೆಗಳು ನಾಡಿನ ಪ್ರಖ್ಯಾತ ಪತ್ರಿಕೆಗಳಲ್ಲಿ ಪ್ರಕಟಗೊಂಡು ‘ಮರಳಿ ಬಂದ ಮಮತೆ’, ‘ಉದಯ ರವಿ’, ‘ನನ್ನವಳು’, ‘ತೆರೆಸರಿದಾಗ’ ಮುಂತಾದ ಕಥಾ ಸಂಕಲನಗಳಲ್ಲಿ ಸೇರಿವೆ.

ಆರ್ಯಾಂಬ ಅವರು ಮಕ್ಕಳಿಗಾಗಿ 12 ಕೃತಿಗಳನ್ನು ರಚಿಸಿದ್ದು ಅವುಗಳಲ್ಲಿ ಚ. ವಾಸುದೇವಯ್ಯ, ರವೀಂದ್ರನಾಥ ಠಾಕೂರ್, ತಾಯಿ ತೆರೇಸ, ನಾಲ್ವಡಿ ಕೃಷ್ಣರಾಜ ಒಡೆಯರ್, ಮೇರಿ ಕ್ಯೂರಿ ಮತ್ತು ತ್ರಿವೇಣಿ ಮುಂತಾದವುಗಳು ಸೇರಿವೆ. ನಾಟಕ ಕ್ಷೇತ್ರದಲ್ಲಿಯೂ ಸಾಕಷ್ಟು ಕೃಷಿಮಾಡಿದ್ದ ಆರ್ಯಾಂಬ ಅವರು ಸಾಲುದೀಪ, ಬೆಕ್ಕಿನಕಣ್ಣು, ಬೆಳಕಿನತ್ತ, ದುಡ್ಡಿದ್ದವನೆ ದೊಡ್ಡಪ್ಪ, ಸಾಕುಮಗ, ಕಸ್ತೂರಿ ಮುಂತಾದ ನಾಟಕಗಳನ್ನು ರಚಿಸಿದ್ದು ಇವು ಆಕಾಶವಾಣಿ ನಾಟಕಗಳಾಗಿ ಪ್ರಸಾರಗೊಂಡಿವೆ.

ಇವಲ್ಲದೆ ‘ಭಾರತದ ಮಹಾಪುರುಷರು’ ಮಾಲಿಕೆಯಲ್ಲಿ ಆರ್ಯಾಂಬ ಅವರು ಬರೆದ ಆದಿಶಂಕರಾಚಾರ್ಯ, ಬಸವೇಶ್ವರ, ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದ, ರವೀಂದ್ರನಾಥ ಠಾಕೂರ್, ಗಾಂಧಿ ಮತ್ತು ಅರವಿಂದ ಘೋಷ್ ಮುಂತಾದ ಮಹನೀಯರ ಕಥೆಗಳು ಮೂಡಿ ಬಂದಿದ್ದು ಈ ಪುಸ್ತಕಗಳು ಶಾಲಾ ಕಾಲೇಜುಗಳ ಪಠ್ಯ ಪುಸ್ತಕಗಳಾಗಿ ಮೂಡಿಬಂದಿವೆ.

ಆರ್ಯಾಂಬ ಅವರು ವಿದ್ಯಾರ್ಥಿ ದೆಸೆಯಲ್ಲಿಯೇ ಕ್ರೀಡೆ, ಸಂಗೀತ, ನಾಟಕಾಭಿನಯಗಳಲ್ಲಿ ತೊಡಗಿಸಿಕೊಂಡಿದ್ದು ಅನೇಕ ಕನ್ನಡ, ಇಂಗ್ಲಿಷ್, ಸಂಸ್ಕೃತ ನಾಟಕಗಳಲ್ಲಿ ಅಭಿನಯಿಸಿದಂತೆ ಟೆಬಲ್ ಟೆನಿಸ್, ಟೆನಿಸ್, ಸಾಫ್ಟ್ ಬಾಲ್, ಬ್ಯಾಡ್‌ಮಿಂಟನ್ ಮುಂತಾದ ಕ್ರೀಡೆಗಳಲ್ಲೂ ವಿಶ್ವವಿದ್ಯಾಲಯದ ಪ್ರತಿನಿಧಿಯಾಗಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಪಡೆದಿದ್ದವರು.

ಟೆನಿಸ್ ಕ್ರೀಡೆಯ ಬಗ್ಗೆ ಸಮಗ್ರ ಅಧ್ಯಯನ ಮಾಡಿ ರಚಿಸಿದ ‘ಟೆನಿಸ್’ ಕೃತಿಯು 1987 ರಲ್ಲಿ ಪ್ರಕಟಗೊಂಡಿದ್ದು ಪರಿಷ್ಕೃತ ಎರಡನೆಯ ಮುದ್ರಣವನ್ನು ಮೈಸೂರು ವಿಶ್ವವಿದ್ಯಾಲವು 2012ರಲ್ಲಿ ಹೊರತಂದಿದೆ. ಇದು ಟೆನಿಸ್ ಬಗ್ಗೆ ಪ್ರಕಟವಾಗಿರುವ ಕನ್ನಡದ ಏಕೈಕ ಗ್ರಂಥವೆನಿಸಿದೆ. ಅಮೆರಿಕ, ಕೆನಡ, ಸಿಂಗಪುರ ದೇಶಗಳನ್ನು ಸುತ್ತಿ ಇವರು ಬರೆದ ಪ್ರವಾಸಾನುಭವ ಕೃತಿ ‘ವಿದೇಶ ಪ್ರವಾಸ’.

ಆರ್ಯಾಂಬ ಅವರು ಹಲವಾರು ಸಂಘಟನೆ, ಸಂಘ, ಸಂಸ್ಥೆಗಳಲ್ಲಿ ಸಕ್ರಿಯ ಸದಸ್ಯರಾಗಿ, ಪದಾಧಿಕಾರಿಗಳಾಗಿ ತಮ್ಮ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ಹೀಗೆ ವಿಶಿಷ್ಟರೀತಿಯಲ್ಲಿ ಸಾಹಿತ್ಯ ಮತ್ತು ಸಮಾಜ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಆರ್ಯಾಂಬ ಪಟ್ಟಾಭಿಯವರನ್ನು ಅರಸಿ ಬಂದಿರುವ ಪ್ರಶಸ್ತಿಗಳು ಹಲವಾರು. ‘ಟೆನಿಸ್’ ಗ್ರಂಥಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಮಲ್ಲಿಕಾ ಪ್ರಶಸ್ತಿ’, ಅತ್ತಿಮಬ್ಬೆ ಪ್ರತಿಷ್ಠಾನದ ‘ಅತ್ತಿಮಬ್ಬೆ ಪ್ರಶಸ್ತಿ’, ವಿದೇಶ ಪ್ರವಾಸ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಲಿಂಗರಾಜ ಸಾಹಿತ್ಯ ಪ್ರಶಸ್ತಿ ಮತ್ತು ಕನ್ನಡ ಲೇಖಕಿಯರ ಪರಿಷತ್ತಿನ ಪ್ರಶಸ್ತಿಗಳು; ಸರ್.ಎಂ. ವಿಶ್ವೇಶ್ವರಯ್ಯ ನವರತ್ನ ಪ್ರಶಸ್ತಿ, ಕರ್ನಾಟಕ ಚೇತನ ಪ್ರಶಸ್ತಿ, ಸಾವಿತ್ರಮ್ಮ ದೇಜಗೌ ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಬಿ. ಸರೋಜದೇವಿ ಸಾಹಿತ್ಯ ಪ್ರಶಸ್ತಿ, ಸಂಚಿ ಹೊನ್ನಮ್ಮ ಪ್ರಶಸ್ತಿ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಆರ್ಯಾಂಬ ಪಟ್ಟಾಭಿ ಅವರಿಗೆ ಸಂದಿವೆ. ಸ್ನೇಹಿತರು, ಅಭಿಮಾನಿಗಳು 2002 ರಲ್ಲಿ ಅರ್ಪಿಸಿದ ಅಭಿನಂದನ ಗ್ರಂಥ ‘ಉನ್ಮೀಲನ’.

Sunday, March 10, 2013

ಕಥೆಗಾರನ ಋಣ ತೀರಿಸುವ ಹೊತ್ತು...

ಕಥೆಗಾರನ ಋಣ ತೀರಿಸುವ ಹೊತ್ತು... | ಪ್ರಜಾವಾಣಿ

ಗಂಗಾವತರಣ - ದ.ರಾ. ಬೇಂದ್ರೆ

ಇಳಿದು ಬಾ ತಾಯಿ ಇಳಿದು ಬಾ
ಹರನ ಜಡೆಯಿಂದ ಹರಿಯ ಅಡಿಯಿಂದ ಋಶಿಯ ತೊಡೆಯಿಂದ ನುಸುಳಿ ಬಾ
ದೇವದೇವರನು ತಣಿಸಿ ಬಾ ದಿಗ್ದಿಗಂತದಲಿ ಹನಿಸಿ ಬಾ ಚರಾಚರಗಳಿಗೆ ಉಣಿಸಿ ಬಾ
ಇಳಿದು ಬಾ ತಾಯಿ ಇಳಿದು ಬಾ

ನಿನಗೆ ಪೊಡಮಡುವೆ ನಿನ್ನನುಡುಕೊಡುವೆ ಏಕೆ ಎಡೆತಡೆವೆ ಸುರಿದು ಬಾ
ಸ್ವರ್ಗ ತೊರೆದು ಬಾ ಬಯಲ ಜರೆದು ಬಾ
ನೆಲದಿ ಹರಿದು ಬಾ

ಬಾರೆ ಬಾ ತಾಯಿ ಇಳಿದು ಬಾ ಇಳಿದು ಬಾ ತಾಯಿ ಇಳಿದು ಬಾ
ನನ್ನ ತಲೆಯೊಳಗೆ ನನ್ನ ಬೆಂಬಳಿಗೆ ನನ್ನ ಒಳಕೆಳಗೆ ನುಗ್ಗಿ ಬಾ
ಕಣ್ಣ ಕಣ್ತೊಳಿಸಿ ಉಸಿರ ಎಳೆ ಎಳಸಿ ನುಡಿಯ ಸೊಸಿ ಮೊಳೆಸಿ ಹಿಗ್ಗಿ ಬಾ
ಎದೆಯ ನೆಲೆಯಲ್ಲಿ ನಿಲಿಸಿ ಬಾ ಜೀವ ಜಲದಲ್ಲಿ ಚಲಿಸಿ ಬಾ ಮೂಲ ಹೊಲದಲ್ಲಿ ನೆಲೆಸಿ ಬಾ
ಕಮ್ಚು ಮಿಂಚಾಗಿ ತೆರಳಿ ಬಾ ನೀರು ನೀರಾಗಿ ಉರುಳಿ ಬಾ ಮಾತೆ ಹೊಡಮರಳಿ ಬಾ
ಇಳಿದು ಬಾ ತಾಯಿ ಇಳಿದು ಬಾ

ದಯೆಯಿರದ ದೀನ ಹರೆಯಳಿದ ಹೀನ ನೀರಿರದ ಮೀನ ಕರೆಕರೆವ ಬಾ
ಕರು ಕಂಡ ಕರುಳೆ ಮನ ಉಂಡ ಮರುಳೆ ಉದ್ದಂಡ ಅರುಳೆ ಸುಳಿ ಸುಳಿದು ಬಾ
ಶಿವ ಶುಭ್ರ ಕರುಣೆ ಅತಿ ಕಿಂಚದರುಣೆ ವಾತ್ಸಲ್ಯ ವರಣೆ ಇಳಿ ಇಳಿದು ಬಾ
ಇಳಿದು ಬಾ ತಾಯಿ ಇಳಿದು ಬಾ
ಕೊಳೆಯ ತೊಳೆವವರು ಇಲ್ಲ ಬಾ ಬೇರೆ
ಶಕ್ತಿಗಳು ಹೊಲ್ಲ ಬಾ ಹೇಗೆ ಮಾಡಿದರು ಅಲ್ಲ ಬಾ
ನಾಡಿ ನಾಡಿಯನು ತುತ್ತ ಬಾ ನಮ್ಮ ನಾಡನ್ನೆ ಸುತ್ತ ಬಾ ಸತ್ತ ಜನರನ್ನು ಎತ್ತ ಬಾ
ಇಳಿದು ಬಾ ತಾಯಿ ಇಳಿದು ಬಾ

ಸುರ ಸ್ವಪ್ನವಿದ್ದ ಪ್ರತಿಬಿಂಬ ಬಿದ್ದ ಉದ್ಬುಧ ಶುದ್ದ ನೀರೆ
ಎಚ್ಚೆತ್ತು ಎದ್ದ ಆಕಾಶದುದ್ದ ದರೆಗಿಳಿಯಲಿದ್ದ ದೀರೆ
ಸಿರಿವಾರಿಜಾತ ವರಪಾರಿಜಾತ ತಾರಾ ಕುಸುಮದಿಂದೆ
ವೃಂದಾರ ವಂದ್ಯೆ ಮಂದಾರ ಗಂಧೆ ನೀನೇ ತಾಯಿ ತಂದೆ
ರಸಪೂರಜನ್ಯೆ ನೀನಲ್ಲ ಅನ್ಯೆ ಸಚ್ಚಿದಾನಂದ ಕನ್ಯೆ

ಬಂದಾರೆ ಬಾರೆ ಒಂದಾರೆ ಸಾರೆ ಕಂಡಾರೆ ತಡೆವರೇನೆ
ಅವತಾರವೆಂದೆ ಎಂದಾರೆ ತಾಯೆ ಈ ಅಧಹ್ಪಾತವನ್ನೆ

ಹರಕೆ ಸಂದಂತೆ ಮಮತೆ ಮಿಂದಂತೆ ತುಂಬಿ ಬಂದಂತೆ
ದಮ್ ದಮ್ ಎಂದಂತೆ ದುಡುಕಿ ಬಾ ನಿನ್ನ ಕಂದನ್ನ ಹುಡುಕಿ ಬಾ ಹುಡುಕಿ ಬಾ ತಾಯೆ ದುಡುಕಿ ಬಾ
ಹರನ ಹೊಸತಾಗಿ ಹೊಳೆದು ಬಾ ಬಾಳು ಬೆಳಕಾಗಿ ಬೆಳೆದು ಬಾ ಕೈ ತೊಳೆದು ಬಾ ಮೈ ತೊಳೆದು ಬಾ

ಇಳಿದು ಬಾ ತಾಯಿ ಇಳಿದು ಬಾ ಇಳೆಗಿಳಿದು ಬಾ ತಾಯಿ ಇಳಿದು ಬಾ
ಶಂಭು ಶಿವಹರನ ಚಿತ್ತೆ ಬಾ ದತ್ತ ನರಹರಿಯ ಮುತ್ತೆ ಬಾ ಅಂಬಿಕಾತನಯನತ್ತೆ ಬಾ
ಇಳಿದು ಬಾ ತಾಯಿ ಇಳಿದು ಬಾ

Sunday, March 3, 2013

ತಾರಾ

ಚಲನಚಿತ್ರರಂಗವೆಂಬ ತಾರೆಗಳ ತೋಟದಲ್ಲಿ ವಿಶಿಷ್ಟರಾದ ತಾರಾ ಅವರ ಹುಟ್ಟಿದ ದಿನ ಮಾರ್ಚ್ 4. ಬಹಳ ವರ್ಷಗಳ ಕಾಲ ರಾಷ್ಟ್ರಮಟ್ಟದ ನಟನಾ ಪ್ರಶಸ್ತಿಗಳಲ್ಲಿ ಕನ್ನಡ ಚಿತ್ರರಂಗದ ಹೆಸರು ಮರೆತುಹೋಗಿದ್ದ ಸಮಯದಲ್ಲಿ ತಮ್ಮ ‘ಹಸೀನಾ’ ಚಿತ್ರದ ಅಭಿನಯದ ಮೂಲಕ ತಾರಾ ಅದನ್ನು ಮತ್ತೊಮ್ಮೆ ತಂದರು. ‘ಕ್ರಮ’, ‘ಕರಿಮಲೆಯ ಕಗ್ಗತ್ತಲು’, ‘ಕಾನೂರು ಹೆಗ್ಗಡತಿ’, ‘ಮುಂಜಾನೆಯ ಮಂಜು’, ‘ನಿನಗಾಗಿ’ ಹೀಗೆ ಹಲವು ಚಲನಚಿತ್ರಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದ ತಾರಾ ಕನ್ನಡ ನಾಡು ಕಂಡ ಅಮೂಲ್ಯ ಪ್ರತಿಭೆ. ಅವರ ಮತದಾನ, ಸಯನೈಡ್ ಅಂತ ಚಿತ್ರಗಳೂ ಅಷ್ಟೇ ಪ್ರಸಿದ್ಧ. 

ತಾರಾ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು ತಮಿಳು ಚಿತ್ರರಂಗದ ಮೂಲಕ. ನಂತರ ಕನ್ನಡಕ್ಕೆ ಬಂದು ಇಲ್ಲಿ ನಿರಂತರವಾಗಿ ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲ ಕನ್ನಡ ಚಲನಚಿತ್ರಗಳಲ್ಲಿ ಮನೆಮಾತಾಗಿದ್ದಾರೆ. ಅಷ್ಟೊಂದು ವರ್ಷ ಚಿತ್ರರಂಗದಲ್ಲಿದ್ದರೂ ಅವರು ನಾಯಕಿಯಾಗಿ ನಟಿಸಿದ್ದು ವಿರಳ ಚಿತ್ರಗಳಲ್ಲಿ. ಕನ್ನಡದ ಪ್ರತಿಷ್ಟಿತ ನಟರಾದ ವಿಷ್ಣುವರ್ಧನ್, ಅಂಬರೀಶ್, ಅನಂತನಾಗ್ ಅವರ ಕೂಡ ಅಲ್ಲಲ್ಲಿ ಕೆಲವು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ತಾರಾ ಹೆಚ್ಚಾಗಿ ಕಂಡದ್ದು ನಮ್ಮ ನಾಯಕರ ತಂಗಿಯ ಪಾತ್ರದಲ್ಲಿ. 
ಸಿದ್ಧಲಿಂಗಯ್ಯ, ಕೆ. ಬಾಲಚಂದರ್, ಗಿರೀಶ್ ಕಾಸರವಳ್ಳಿ, ಗಿರೀಶ್ ಕಾರ್ನಾಡ್, ಶೇಷಾದ್ರಿ, ಮಣಿರತ್ನಂ, ನಾಗತಿಹಳ್ಳಿ ಅಂಥಹ ವಿಭಿನ್ನ ನೆಲೆಯ ಶ್ರೇಷ್ಠರ ನಿರ್ದೇಶನಗಳಲ್ಲಿ ಕೆಲಸಮಾಡಿದ್ದಾರೆ. ಹಲವು ರೀತಿಯ ಸಾರ್ವಜನಿಕ ಕಾರ್ಯಗಳಲ್ಲಿ ಆಸಕ್ತರಾಗಿರುವ ತಾರಾ ಅವರು ರಾಜಕೀಯವಲಯದಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಅವರು ವಿಧಾನ ಪರಿಷತ್ ಸದಸ್ಯರೂ ಹೌದು. ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ‘ಬೆಳ್ಳಿ ಹೆಜ್ಜೆ’, ‘ವಾರ್ಷಿಕ ಚಲನಚಿತ್ರೋತ್ಸವ’ಗಳ ಮೂಲಕ ತಮ್ಮ ಕಾರ್ಯಗಳನ್ನು ಶ್ರದ್ಧೆಯಿಂದ ಮಾಡಿದ್ದಾರೆ. 

ಚಲನಚಿತ್ರ ತಂತ್ರಜ್ಞ ವೇಣು ಅವರನ್ನು ವರಿಸಿರುವ ತಾರಾ ಅವರು ಇತ್ತೀಚೆಗೆ ತಾಯಿಯಾಗಿದ್ದಾರೆ.

ಪ್ರಾರ್ಥನೆ - ಜಿ. ಪಿ. ರಾಜರತ್ನಂ

ಮಲೆಗಳಲಿ ಕಲ್ಲುಂಟು
ಹೊಲಗಳಲಿ ಹುಲ್ಲುಂಟು
ಹೊಳೆಗಳಲಿ ಮೀನುಂಟು
ಗೂಡಿನಲಿ ಜೇನುಂಟು
ನೀನುಂಟು ಎಲ್ಲೆಲ್ಲೂ – ಓ ಶಿವ
ನೀನುಂಟು ಎಲ್ಲೆಲ್ಲೂ

ಬಾಳೆಯಲಿ ಫಲವುಂಟು
ಚಂದ್ರನಲಿ ಮೊಲವುಂಟು
ಹುತ್ತದಲಿ ಹಾವುಂಟು
ಬೆಂಕಿಯಲಿ ಕಾವುಂಟು
ನೀನುಂಟು ಎಲ್ಲೆಲ್ಲೂ – ಓ ಶಿವ
ನೀನುಂಟು ಎಲ್ಲೆಲ್ಲೂ

ದೀಪದಲಿ ಬೆಳಕುಂಟು
ಕೋಪದಲಿ ಹುಳುಕುಂಟು
ಸರುವ ಕಡೆ ನೀನುಂಟು
ಇರುವ ಕಡೆ ನಾನುಂಟು
ನೀನುಂಟು ಎಲ್ಲೆಲ್ಲೂ – ಓ ಶಿವ
ನೀನುಂಟು ಎಲ್ಲೆಲ್ಲೂ

Friday, March 1, 2013

ಸೂಳೆಕೆರೆ

ಆಂಧ್ರಪ್ರದೇಶದ ಕಂಭಂಕೆರೆ ಹೊರತುಪಡಿಸಿದರೆ ದಕ್ಷಿಣ ಭಾರತದ ಎರಡನೇ ಅತಿದೊಡ್ಡ ಕೆರೆ ಎಂಬ ಹೆಗ್ಗಳಿಕೆ ಇರುವುದು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸೂಳೆಕೆರೆಗೆ. ಇದು ಕರ್ನಾಟಕದ ಪ್ರಾಚೀನ ತಂತ್ರಜ್ಞಾನದ ಹೆಮ್ಮೆ. ಹಿರೇಹಳ್ಳಕ್ಕೆ ಎರಡು ಗುಡ್ಡಗಳ ಮಧ್ಯೆ ಒಂದು ಬೃಹತ್ ಒಡ್ಡು ಕಟ್ಟಿ ಹಾಕಿ ನೀರು ನಿಲ್ಲಿಸಿರುವ ಆ ಕೆರೆಯ ಸುತ್ತಳತೆ 65 ಕಿಲೋಮೀಟರ್. ಅದರ ಅಚ್ಚುಕಟ್ಟು ಪ್ರದೇಶ ಎರಡು ಸಾವಿರ ಹೆಕ್ಟೇರ್.

ಇಷ್ಟೊಂದು ವಿಸ್ತಾರದ ಕೆರೆ ನೋಡುಗರ ಕಣ್ಣಿಗೆ ಸಾಗರದಂತೆ ಕಾಣುತ್ತದೆ. ಎರಡು ಬೆಟ್ಟಗಳ ನಡುವೆ ಸುಮಾರು 950 ಅಡಿ ಉದ್ದದ ಏರಿ. ಏರಿಯ ಅಗಲ ಒಂದೆಡೆ 60 ಅಡಿಗಳಾದರೆ, ಇನ್ನೊಂದೆಡೆ 80 ಅಡಿಗಳಷ್ಟಿದೆ.

ಐತಿಹಾಸಿಕ ಹಿನ್ನೆಲೆ

ಕೆರೆಯ ನಿರ್ಮಾಣದ ಹಿಂದೆ ಅಚ್ಚರಿಯ ಸಂಗತಿಗಳಿವೆ. ಇವು ಇತಿಹಾಸಕ್ತರಿಗೆ ಹೆಚ್ಚಿನ ಸಂಶೋಧನೆಗೆ ಆಕರಗಳನ್ನು ಒದಗಿಸುತ್ತವೆ. ಈ ಪ್ರದೇಶದಲ್ಲಿ ಹಿಂದೆ ಸ್ವರ್ಗವತಿ ಎಂಬ ಪಟ್ಟಣ ಇತ್ತೆಂಬ ಐತಿಹ್ಯ. ವಿಕ್ರಮರಾಯನೆಂಬ ರಾಜ ಆಳುತ್ತಿದ್ದ, ನೂತನಾದೇವಿ ಆತನ ಪತ್ನಿ. ಈ ದಂಪತಿಗೆ ಶಾಂತಲಾದೇವಿ (ಶಾಂತಮ್ಮ) ಎಂಬ ಒಬ್ಬಳೇ ಮಗಳು. ಅವಳು ಯವ್ವನಾವಸ್ಥೆಗೆ ಬಂದಾಗ ಒಮ್ಮೆ ತಂದೆಯ ಅನುಮತಿ ಪಡೆಯದೆ ಕಾರ್ಯನಿಮಿತ್ತ ನೆರೆಯ ಊರಿಗೆ ಹೋಗಿ ಅರಮನೆಗೆ ಹಿಂತಿರುಗುತ್ತಾಳೆ. ಆಕೆಯ ನಡವಳಿಕೆಯನ್ನು ತಂದೆ ವಿಕ್ರಮರಾಯ ಆಕ್ಷೇಪಿಸಿ ನಿಂದಿಸುತ್ತಾನೆ. ನಡತೆಗೆಟ್ಟವಳು (ಸೂಳೆ) ಎಂದು ಜರಿಯುತ್ತಾನೆ. ತಂದೆಯ ಬೈಗುಳ ಕೇಳಿ ನೊಂದ ಶಾಂತಲಾದೇವಿ ಆರೋಪ ಮುಕ್ತಳಾಗಲು ಒಂದು ಕೆರೆ ನಿರ್ಮಿಸಲು ಸಂಕಲ್ಪ ಮಾಡುತ್ತಾಳೆ. ಸ್ವರ್ಗವತಿ ಪಟ್ಟಣದ ವೇಶ್ಯೆಯರು ವಾಸಿಸುತ್ತಿದ್ದ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತ ಎಂದು ನಾಮಕರಣ ಮಾಡುವುದಾದರೆ ಆ ಪ್ರದೇಶವನ್ನು ಬಿಟ್ಟುಕೊಡುವುದಾಗಿ ಅವರು ಹೇಳುತ್ತಾರೆ. ಅವರ ಬೇಡಿಕೆಯಂತೆ ಒಪ್ಪಿದ ರಾಜಪುತ್ರಿ ಅಲ್ಲಿ ಕೆರೆ ನಿರ್ಮಾಣ ಮಾಡಿದಳು ಎಂಬುದು ಇತಿಹಾಸ.

ನೀರಿನ ಮೂಲ

ಅದೇನೆ ಇರಲಿ, ಇಲ್ಲಿನ ಐತಿಹ್ಯದಂತೆ ಸೂಳೆ ಶುಭ್ರ ಮನಸ್ಸಿನ ಶ್ರೇಷ್ಠಳು. ತ್ಯಾಗ ಸಂಕೇತದ ದೈವೀಸಮಾನಳೆಂಬ ಪೂಜ್ಯಭಾವನೆ ಇದೆ. ಸೂಳೆಕೆರೆಯ ಬಗ್ಗೆ ಚಿಕ್ಕ ಚಿಕ್ಕ ಸಮೃದ್ಧ ಜಾನಪದ ಗೀತೆಗಳಲ್ಲದೆ, ಕನಿಷ್ಠ ಮೂರು ಗ್ರಂಥಸ್ಥ ಕಾವ್ಯಗಳು ಹುಟ್ಟಿಕೊಂಡಿವೆ. ಕೆರೆ ವಿಸ್ತಾರವಾದ ಬೆಟ್ಟ ಸಾಲುಗಳ ಪ್ರದೇಶದಲ್ಲಿದೆ. ಸುತ್ತಲಿನ ನೂರಾರು ಹಳ್ಳಿಗಳಲ್ಲಿ ಬೀಳುವ ಮಳೆ ನೀರು ಕೆರೆಗೆ ಹರಿದುಬರುತ್ತದೆ. ಹಳೇ ಮೈಸೂರು ರಾಜ್ಯದ ಬ್ರಿಟಿಷ್ ಎಂಜಿನಿಯರ್ ಸ್ಯಾಂಕಿ ಅವರು ಈ ಪ್ರದೇಶ ಕೆರೆ ನಿರ್ಮಾಣಕ್ಕೆ ಸೂಕ್ತವಲ್ಲ. ಹಿಂದಿನ ಕಾಲದ ನೀರಾವರಿ ತಂತ್ರಜ್ಞರ ಚಾಣಾಕ್ಷತೆಯಿಂದ ಈ ಕೆರೆ ನಿರ್ಮಾಣವಾಗಿದೆ. ಅದು ಅಚ್ಚರಿಯ ಸಂಗತಿ ಎಂದು ಹೇಳಿರುವುದು ಗಮನಾರ್ಹ. ಕೆರೆಯ ಉತ್ತರದಲ್ಲಿ ಸಿದ್ದನ ತೂಬು ಹಾಗೂ ಬಸವ ತೂಬು ಎಂಬ ಎರಡು ನಾಲೆಗಳಿವೆ. ಈ ಕೆರೆ ಸುಮಾರು 15ರಿಂದ 20 ಹಳ್ಳಿಗಳ ಕೃಷಿ ಭೂಮಿಗೆ (2000 ಎಕರೆ) ನೀರಾವರಿ ಸೌಲಭ್ಯ ಒದಗಿಸಿದೆ. ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಪೂರೈಸುತ್ತಿದೆ.

ತುಂಬಿದ ಕೆರೆಯ ಅಲೆಗಳು ಕಡಲ ಅಲೆಗಳಂತೆ ದಡಕ್ಕೆ ಅಪ್ಪಳಿಸುವುದು ನೋಡಲು ಪರಮಾದ್ಭುತ. ದಾವಣಗೆರೆ- ಚನ್ನಗಿರಿ ಮಾರ್ಗದಲ್ಲಿರುವ ಈ ಕೆರೆಯ ಸೌಂದರ್ಯವನ್ನೊಮ್ಮೆ ಆಸ್ವಾದಿಸಿ ನೋಡಿ.

ಇನ್ನೇನಿದೆ?

ಕೆರೆಯ ಪೂರ್ವ ದಿಕ್ಕಿಗೆ ಹೊಯ್ಸಳ ಮತ್ತು ಕೆಳದಿ ವಾಸ್ತುಶೈಲಿಯ ಸಿದ್ದೇಶ್ವರ ದೇಗುಲವಿದೆ. ಇದರ ಆವರಣದಲ್ಲಿ ಶಾಂತವ್ವನ ದೇಗುಲವೂ ಇದೆ. ಕೆರೆಯ ಅಂಚಿನಲ್ಲೊಂದು ಆಕರ್ಷಕ ಕಲ್ಲು ಮಂಟಪ. ಇಲ್ಲಿಂದ ಕೆರೆ ವೀಕ್ಷಣೆ ಮನಮೋಹಕ. ಮೀನುಗಾರಿಕೆಗೂ ಈ ಕೆರೆಯ ಕೊಡುಗೆ ಅಪಾರ. ವಿಶೇಷವೆಂದರೆ, ಬೆಳದಿಂಗಳಲ್ಲಿ ಹಾಲಿನಂತೆ ನೀರ ಮೇಲೆಲ್ಲ ಚೆನ್ನಾಡುವ ಚಂದ್ರನ ಬೆಳಕು ಹೆಚ್ಚು ಮುದ ನೀಡುತ್ತದೆ. ಸೂರ್ಯೋದಯ, ಸೂರ್ಯಾಸ್ತಗಳ ವೇಳೆಗಳೂ ಅಷ್ಟೇ ರಂಗಾಗಿರುತ್ತದೆ.

ತಾಯೆ ಬಾರ ಮೊಗವ ತೋರ - ಗೋವಿಂದ ಪೈ

ತಾಯೆ ಬಾರ ಮೊಗವ ತೋರ ಕನ್ನಡಿಗರ ಮಾತೆಯೆ 
ಹರಸು ತಾಯೆ ಸುತರ ಕಾಯೆ ನಮ್ಮ ಜನ್ಮದಾತೆಯೆ

ನಮ್ಮ ತಪ್ಪನೆನಿತೊ ತಾಳ್ವೆ ಅಕ್ಕರೆಯಿಂದೆಮ್ಮನಾಳ್ವೆ 
ನೀನೆ ಕಣಾ ನಮ್ಮ ಬಾಳ್ವೆ ನಿನ್ನ ಮರೆಯಲಮ್ಮೆವು
ತನು ಕನ್ನಡ ಮನ ಕನ್ನಡ ನುಡಿ ಕನ್ನಡವೆಮ್ಮವು.

ಹಣ್ಣನೀವ ಕಾಯನೀವ ಪರಿಪರಿಯ ಮರಂಗಳೋ
ಪತ್ರಮೀವ ಪುಷ್ಪಮೀವ ಲತೆಯ ತರತರಂಗಳೋ
ತೆನೆಕೆನೆಯ ಗಾಳಿಯೋ ಖಗಮೃಗೋರಗಾಳಿಯೋ
ನದಿ ನಗರ ನಗಾಳಿಯೋ ಇಲ್ಲಿಲ್ಲದುದುಳಿದುದೆ?

ಜೇನು ಸುರಿವ ಹಾಲು ಹರಿವ ದಿವಂ ಭೂಮಿಗಿಳಿದುದೆ?
ಬುಗುರಿಯೀಯೆ ಶಬರಿ ಕಾಯೆ ರಾಮನಿಲ್ಲಿ ಬಂದನೆ?
ಕನ್ನಡ ದಳ ಕೂಡಿಸಿ ಖಳ ದಶಾಸ್ಯನಂ ಕೊಂದನೆ?
ಪಾಂಡವರಜ್ಞಾತಮಿದ್ದ, ವಲಲಂ ಕೀಚಕನ ಗೆದ್ದ;
ಕುರುಕುಲಮಂಗದನ ಮೆದ್ದ ನಾಡು ನೋಡಿದಲ್ಲವೇ?
ನಂದನಂದನನಿಲ್ಲಿಂದ ಸಂದಿಗಯ್ದನಲ್ಲವೇ?

ಶಕವಿಜೇತನಮರ ಶಾತವಾಹನಾಖ್ಯನೀ ಶಕಂ,
ನಿನ್ನೊಳಂದು ತೊಡಗಿ ಸಂದುದರ್ಧ ಭರತದೇಶಕಂ
ಚಳುಕ್ಯರಾಷ್ಟ್ರಕೂಟರೆಲ್ಲಿ ಗಂಗರಾ ಕದಂಬರೆಲ್ಲಿ
ಹೊಯ್ಸಳ ಕಳಚುರ್ಯರೆಲ್ಲ ವಿಜಯನಗರ ಭೂಪರು
ಆಳ್ದರಿಲ್ಲಿಯಲ್ಲದೆಲ್ಲಿ ತಾಯೆ ಮೇಣಲೂಪರು.

ಜೈನರಾದ ಪೂಜ್ಯಪಾದ ಕೊಂಡಕುಂದವರ್ಯರ,
ಮಧ್ವಯತಿಯೆ ಬಸವಪತಿಯೆ ಮುಖ್ಯಮತಾಚಾರ್ಯರ
ಶರ್ವ ಪಂಪ ರನ್ನರ, ಲಕ್ಷ್ಮೀಪತಿ ಜನ್ನರ
ಷಡಕ್ಷರಿ ಮುದ್ದಣ್ಣರ ಪುರಂದರವರೇಣ್ಯರ
ತಾಯೆ ನಿನ್ನ ಬಸಿರೆ ಹೊನ್ನಗನಿ ವಿದ್ಯಾರಣ್ಯರ

ಹಳೆಯಬೀಡ ಬೇಲನಾಡ ಮಾಡಮೆನಿತೊ ಸುಂದರಂ,
ಬಿಳಿಯ ಕೊಳದ ಕಾರಕಳದ ನಿಡುಕರೆನಿತೊ ಬಂಧುರಂ,
ಇಲ್ಲಿಲ್ಲದ ಶಿಲ್ಪಮಿಲ್ಲ, ನಿನ್ನ ಕಲ್ಲೆ ನುಡಿವುದಲ್ಲ
ಹಿಂಗತೆಯಿನಿವಾಲಸೊಲ್ಲನೆಮಗೆ ತೃಷೆ ದಕ್ಕಿಸು
ಹೊಸತು ಕಿನ್ನರಿಯಲಿ ನಿನ್ನ ಹಳೆಯ ಹಾಡನುಕ್ಕಿಸು.

ಆರ್ಯರಿಲ್ಲಿ ಬಾರದಲ್ಲಿ ಬಾಸೆ ಎಲ್ಲಿ ಸಕ್ಕದಂ?
ನಿನ್ನ ನುಡಿಯಿನಚ್ಚುಪಡಿಯನಾಂತರೆನಿತೊ ತಕ್ಕುದಂ?
ಎನಿತೊ ಹಳೆಯ ಕಾಲದಿಂದ ಬರ್ದಿಲಮೀ ಬಾಸೆಯಿಂದ
ಕಾಲನ ಮೂದಲಿಸಿ ನಿಂದ ನಿನಗೆ ಮರೆವೆ ಹೊದೆವುದೆ?
ನಿನ್ನ ನುಡಿಗೆ ನಿನ್ನ ನಡೆಗೆ ಮುದುಪುಮೆಂದುಮೊದೆವುದೆ?

ತನ್ನ ಮರೆಯ ಕಂಪನರಿಯದದನೆ ಹೊರಗೆ ಹುಡುಕುವ
ಮೃಗದ ಸೇಡು ನಮ್ಮ ಪಾಡು ಪರರ ನುಡಿಗೆ ಮಿಡುಕುವ!
ಕನ್ನಡ ಕಸ್ತೂರಿಯನ್ನ ಹೊಸತುಸಿರಿಂ ತೀಡದನ್ನ
ಸುರಭಿ ಎಲ್ಲಿ ನೀನದನ್ನ ನವಶಕ್ತಿಯನೆಬ್ಬಿಸು
ಹೊಸ ಸುಗಂಧದೊಸಗೆಯಿಂದ ಜಗದಿ ಹೆಸರ ಹಬ್ಬಿಸು!

ನಿನ್ನ ಪಡೆಯ ಕತೆಯ ಕಡೆಯ ನುಡಿಯೆ ತಾಳಿಕೋಟೆಯು?
ಕಡಲಿನೊರತೆಗೊಳವೆ ಕೊರತೆ ಬತ್ತದು ನಿನ್ನೂಟೆಯು
ಸೋಲಗೆಲ್ಲವಾರಿಗಿಲ್ಲ ಸೋತು ನೀನೆ ಗೆದ್ದೆಯಲ್ಲ
ನಿನ್ನನಳಿವು ತಟ್ಟಲೊಲ್ಲ ತಾಳಿಕೋಟೆ ಸಾಸಿರಂ
ಬಾಹುಬಲದಿ ಮನೋಬಲದಿ ತಾಯೆ ಗೆಲುವೆ ಭಾಸುರಂ!

ಕುಗ್ಗದಂತೆ ಹಿಗ್ಗಿಪಂತೆ ನಿನ್ನ ಹೆಸರ ಟೆಕ್ಕೆಯಂ
ನೀಗದಂತೆ ಸಾಗಿಪಂತೆ ನಿನ್ನ ನುಡಿಯ ಢಕ್ಕೆಯಂ
ನಮ್ಮೆದೆಯಂ ತಾಯೆ ಬಲಿಸು ಎಲ್ಲರ ಬಾಯಲ್ಲಿ ನೆಲೆಸು
ನಮ್ಮ ಮನಮನೊಂದೆ ಕಲಸು ಇದನೊಂದನೆ ಕೋರುವೆ
ನಿನ್ನ ಮೂರ್ತಿ ಜಗತ್ಕೀರ್ತಿ ಎಂದಿಗೆಮಗೆ ತೋರುವೆ?

ಕುನ್ನುಕ್ಕುಡಿ ವೈದ್ಯನಾಥನ್


ಪಿಟೀಲು ವಾದನದಲ್ಲಿ ದೇಶದಲ್ಲಿ ಕಂಡುಬರುವ ಪ್ರಧಾನ ಹೆಸರುಗಳಲ್ಲಿ ಕುನ್ನುಕ್ಕುಡಿ ವೈದ್ಯನಾಥನ್ ಒಬ್ಬರು.

ಈ ಮಹಾನ್ ಸಂಗೀತ ವಿದ್ವಾಂಸ ವೈದ್ಯನಾಥನ್ ಅವರು ಮಾರ್ಚ್ 2, 1935ರ ವರ್ಷದಲ್ಲಿ ಮುರುಗನ್ ದೇವಾಲಯದ ಊರಾದ ಕುನ್ನುಕ್ಕುಡಿಯಲ್ಲಿ ವಿದ್ವಾನ್ ರಾಮಸ್ವಾಮಿ ಶಾಸ್ತ್ರಿ ಮತ್ತು ಮೀನಾಕ್ಷಿ ದಂಪತಿಗಳ ಸುಪುತ್ರರಾಗಿ ಜನಿಸಿದರು. ತಂದೆ ರಾಮಸ್ವಾಮಿ ಶಾಸ್ತ್ರಿಗಳು ಸಂಸ್ಕೃತ ಮತ್ತು ತಮಿಳಿನ ಮಹಾನ್ ವಿದ್ವಾಂಸರೆಂದು ಪಡೆದ ಖ್ಯಾತಿಯ ಜೊತೆಗೆ ಕರ್ನಾಟಕ ಸಂಗೀತ ಮತ್ತು ಕಥಾಕಾಲಕ್ಷೇಪಗಳಿಗೂ ಹೆಸರಾಗಿದ್ದರು. ತಮ್ಮ ತಂದೆಯವರಿಂದ ವೈದ್ಯನಾಥನ್ ಅವರು ಬಾಲ್ಯದಿಂದಲೇ ಸಂಗೀತಾಭ್ಯಾಸವನ್ನು ಕೈಗೊಂಡರು.

ಹಣೆಯಲ್ಲಿ ದೊಡ್ಡ ವಿಭೂತಿ, ಹಸನ್ಮುಖದೊಂದಿಗೆ ಸಂಗೀತದ ಸ್ವಾದವನ್ನು ಸಂತಸದಿಂದ ಅನುಭಾವಿಸುತ್ತಾ, ಪ್ರೇಕ್ಷಕ ಶ್ರೋತೃವಿಗೆ ಅಪ್ಯಾಯಮಾನತೆ ಹುಟ್ಟುವ ರೀತಿಯಲ್ಲಿ ಪಿಟೀಲು ನುಡಿಸುತ್ತಾ ಸಂಭ್ರಮಿಸುವುದು.... ಇದು ಕುನ್ನುಕ್ಕುಡಿ ವೈದ್ಯನಾಥನ್ ಎಂದರೆ ನಮಗೆ ನೆನಪಿಗೆ ಬರುವ ಚಿತ್ರ. ವಯಲಿನ್ ವಾದ್ಯದಲ್ಲಿ ಅವರಿಂದ ಹೊರಹೊಮ್ಮುತ್ತಿದ್ದ ವೈವಿಧ್ಯತೆ, ಬಿರುಸು, ಮೃದುತ್ವ, ನಾಜೂಕು, ನಾವೀನ್ಯತೆ, ಮನರಂಜನೆ ಇವೆಲ್ಲಾ ಸಂಗೀತ ಪಂಡಿತರಿಂದ ಪಾಮರರವರೆಗೆ ತರುತ್ತಿದ್ದ ಅನುಭಾವ ಅಪ್ರತಿಮವಾದದ್ದು.

ತಮ್ಮ ಹನ್ನೆರಡನೆಯ ವಯಸ್ಸಿನಿಂದಲೇ ಕುನ್ನುಕ್ಕುಡಿ ವೈದ್ಯನಾಥನ್ ಅವರು ಸಂಗೀತದ ಘಟಾನುಘಟಿಗಳೆಂದು ಹೆಸರಾದ ಅರೈಯಕುಡಿ ರಾಮಾನುಜೈಂಗಾರ್, ಸೆಮ್ಮಂಗುಡಿ ಶ್ರೀನಿವಾಸ ಅಯ್ಯರ್, ಮಹಾರಾಜಪುರಂ ಸಂತಾನಂ ಮುಂತಾದವರ ಕಚೇರಿಗಳಿಗೆ ಪಿಟೀಲು ವಾದನ ನೀಡುತ್ತಿದ್ದರು. ನಾದಸ್ವರ ವಿದ್ವಾಂಸರಾದ ಟಿ ಎನ್ ರಾಜರತ್ನಂ ಪಿಳ್ಳೈ ಮತ್ತು ತಿರುವೆಂಕಾಡು ಸುಬ್ರಮಣ್ಯಂ ಪಿಳ್ಳೈ ಅವರೊಂದಿಗೆ ಸಹಾ ಕುನ್ನುಕ್ಕುಡಿ ವೈದ್ಯನಾಥನ್ ಅವರ ಪಿಟೀಲು ವಾದನ ಜನಪ್ರಿಯತೆ ಪಡೆದಿತ್ತು.

1976ರ ವರ್ಷದಿಂದ ಮೊದಲ್ಗೊಂಡು ಸಂಗೀತ ಕಚೇರಿಗಳಲ್ಲಿ ಪಕ್ಕವಾದ್ಯಗಾರರಾಗಿ ಪಾಲ್ಗೊಳ್ಳುವುದನ್ನು ನಿಲ್ಲಿಸಿದ ಕುನ್ನುಕ್ಕುಡಿಯವರು, ತಮ್ಮದೇ ಕಚೇರಿಗಳತ್ತ ಹೆಚ್ಚು ಗಮನಹರಿಸತೊಡಗಿದರು. ತಮ್ಮ ಸಂಗೀತ ಕಚೇರಿಗಳಲ್ಲಿ ನಿರಂತರವಾಗಿ ಹೊಸತನ ತುಂಬುವತ್ತ ಉತ್ಸುಕರಾಗಿದ್ದ ಅವರನ್ನು, ವಲಯಪಟ್ಟಿ ಸುಬ್ರಮಣ್ಯಂ ಅವರ ಡೋಲುವಾದನದ ಸಂಯೋಗವನ್ನು ತಮ್ಮ ಕಚೇರಿಗಳೊಡನೆ ಬೆಸೆಯುವತ್ತ ಪ್ರೇರೇಪಿಸಿತು. ಸುಬ್ರಮಣ್ಯಮ್ ಅವರ ಡೋಲು ವಾದನದೊಡನೆ ಕುನ್ನುಕ್ಕುಡಿಯವರು ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದರು. ಸಂಗೀತದಲ್ಲಿ ಆರೋಗ್ಯ ಉತ್ತಮಪಡಿಸುವ ಗುಣವಿದೆ ಎಂಬುದು ಕುನ್ನುಕ್ಕುಡಿ ವೈದ್ಯನಾಥನ್ ಅವರಲ್ಲಿದ್ದ ಅಚಲ ನಂಬಿಕೆ.

ಭಕ್ತಿ ಸಂಗೀತ ಮತ್ತು ಸಿನಿಮಾ ಸಂಗೀತಗಳಲ್ಲಿ ಸಹಾ ಕುನ್ನುಕ್ಕುಡಿ ವೈದ್ಯನಾಥನ್ ಅವರು ಪ್ರಸಿದ್ಧರು. ಹಲವಾರು ಪ್ರಸಿದ್ಧ ತಮಿಳು ಚಿತ್ರಗಳಿಗೆ ಸಂಗೀತ ನೀಡಿದುದೇ ಅಲ್ಲದೆ, ಕೆಲವೊಂದು ಚಿತ್ರಗಳಲ್ಲಿ ಅವರು ಪಾತ್ರನಿರ್ವಹಣೆಯನ್ನೂ ಮಾಡಿದ್ದರು. ಒಂದು ಚಿತ್ರವನ್ನೂ ನಿರ್ಮಿಸಿದ್ದರು. ತಿರುವಯ್ಯಾರ್ ಕ್ಷೇತ್ರದಲ್ಲಿ ನಡೆಯುವ ತ್ಯಾಗರಾಜ ಆರಾಧನಾ ಮಹೋತ್ಸವ ಕಾರ್ಯಕ್ರಮಗಳು ಮತ್ತು ಹಲವಾರು ಸಾಂಸ್ಕೃತಿಕ ವೇದಿಕೆಗಳ ಸಂಘಟಕರಾಗಿ ಸಹಾ ಅವರು ಉತ್ತಮ ಕಾರ್ಯನಿರ್ವಾಹಕರೆಂದು ಹೆಸರು ಪಡೆದಿದ್ದರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಯೇ ಅಲ್ಲದೆ, ಕಲೈಮಾಮಣಿ, ಸಂಗೀತ ನಾಟಕ ಅಕಾಡೆಮಿ ಗೌರವ, ಚಿತ್ರ ಸಂಗೀತಕ್ಕಾಗಿನ ಶ್ರೇಷ್ಠ ಸಂಗೀತ ನಿರ್ದೇಶಕ ಪ್ರಶಸ್ತಿಗಳು ಮುಂತಾದ ಅಸಂಖ್ಯಾತ ಗೌರವಗಳಿಗೆ ಕುನ್ನುಕ್ಕುಡಿ ವೈದ್ಯನಾಥನ್ ಅವರು ಪಾತ್ರರಾಗಿದ್ದರು. ಇವೆಲ್ಲಕ್ಕೂ ಮಿಗಿಲಾಗಿ ಕುನ್ನುಕ್ಕುಡಿ ವೈದ್ಯನಾಥನ್ ಕಚೇರಿ ಎಂದರೆ ತುಂಬಿತುಳುಕುತ್ತಿದ್ದ ಜನಸಂದಣಿ. ಶ್ರೇಷ್ಠ ಸಂಗೀತಜ್ಞರಿಗೆ ಸಂಗೀತ ವಿದ್ವತ್ತನ್ನುಭಿತ್ತರಿಸುತ್ತಲೇ, ಜನಸಾಮಾನ್ಯನಿಗೂ ಅಪ್ಯಾಯಮಾನವಾಗುವ ರೀತಿಯಲ್ಲಿ ನಾದ ಹೊಮ್ಮಿಸುತ್ತಾ, ಸಂಗೀತ ಕ್ಷೇತ್ರಕ್ಕೆ ಹೊಸ ಹೊಸ ಶ್ರೋತೃಗಳನ್ನು ನಿರಂತರವಾಗಿ ಸೇರಿಸುತ್ತಾ ನಡೆದ ಕುನ್ನುಕ್ಕುಡಿ ವೈದ್ಯನಾಥನ್ ಅವರ ಸಾಮರ್ಥ್ಯ ಅದ್ವಿತೀಯವಾದದ್ದು.

ಈ ಮಹಾನ್ ಸಂಗೀತ ವಿದ್ವಾಂಸರು ಸೆಪ್ಟೆಂಬರ್ 8, 2008ರಂದು ಈ ಲೋಕವನ್ನಗಲಿದರು. 

Thursday, February 28, 2013

ಹೂವಾಡಗಿತ್ತಿ -ಪ್ರೊ. ಎಂ. ವಿ. ಸೀತಾರಾಮಯ್ಯ

ಹೂವನು ಮಾರುತ
ಹೂವಾಡಗಿತ್ತಿ
ಹಾಡುತ ಬರುತಿಹಳು
‘ಘಮಘಮ ಹೂಗಳು
ಬೇಕೇ’ ಎನ್ನುತ
ಹಾಡುತ ಬರುತಿಹಳು

ಬಿಳುಪಿನ ಮಲ್ಲಿಗೆ
ಹಳದಿಯ ಸಂಪಿಗೆ
ಹಸುರಿನ ಹೊಸ ಮರುಗ;
ಹಾಕಿ ಕಟ್ಟಿರುವೆ
ಬೇಕೇ ಎನುತ
ಹಾಡುತ ಬರುತಿಹಳು

ಹೊಸ ಸೇವಂತಿಗೆ
ಹೊಸ ಇರುವಂತಿಗೆ
ಅರಸಿನ ತಾಳೆಯಿದೆ;
ಅಚ್ಚ ಮಲ್ಲೆಯಲಿ
ಪಚ್ಚ ತೆನೆಗಳು
ಸೇರಿದ ಮಾಲೆಯಿದೆ.

ಕಂಪನು ಚೆಲ್ಲುವ
ಕೆಂಪು ಗುಲಾಬಿ
ಅರಳಿದ ಹೊಸ ಕಮಲ;
ಬಿಳುಪಿನ ಜಾಜಿ
ಅರಳಿದ ಬಿಳಿ ಕಮಲ.

ಬಗೆ ಬಗೆ ಹೂಗಳು
ಬೇಕೇ ಎನುತ
ಹಾಡುತ ಬರುತಿಹಳು;
ಹೂವನು ಮಾರುತ
ಹೂವಾಡಗಿತ್ತಿ
ಹಾಡುತ ಬರುತಿಹಳು.

Tuesday, February 26, 2013

ಕೋ ಚೆನ್ನಬಸಪ್ಪ

ನಿವೃತ್ತ ನ್ಯಾಯಾಧೀಶರೂ, ಸ್ವಾತಂತ್ರ್ಯ ಮತ್ತು ಏಕೀಕರಣ ಹೋರಾಟಗಾರರೂ, ಕನ್ನಡದ ಹಿರಿಯ ಬರಹಗಾರರೂ ಹೀಗೆ ವಿವಿಧ ಮುಖೀ ವ್ಯಕ್ತಿತ್ವದ ಕೋ. ಚೆನ್ನಬಸಪ್ಪನವರು ಫೆಬ್ರವರಿ 27, 1922ರಂದು ಬಳ್ಳಾರಿ ಜಿಲ್ಲೆಯ ಆಲೂರಿನ ಸಮೀಪದ ಕಾನಮಡುಗು ಎಂಬಲ್ಲಿ ಜನಿಸಿದರು. ತಂದೆ ವೀರಣ್ಣನವರು ಮತ್ತು ತಾಯಿ ಬಸಮ್ಮನವರು. ಕಾನಮಡುಗು ಮತ್ತು ಬಳ್ಳಾರಿಯಲ್ಲಿ ಶಾಲಾ ವಿದ್ಯಾಭ್ಯಾಸ ನಡೆಸಿದ ಚೆನ್ನಬಸಪ್ಪನವರು ಅನಂತಪುರದಲ್ಲಿ ಕಾಲೇಜು ವ್ಯಾಸಂಗ ನಡೆಸಿದರು. ವಿದ್ಯಾರ್ಥಿ ದೆಸೆಯಲ್ಲಿದ್ದಾಗ ಸ್ವಾತಂತ್ರ್ಯ ಚಳುವಳಿಗೆ ಧುಮುಕಿ, ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ; ಚಳುವಳಿಯಲ್ಲಿ ವಿದ್ಯಾರ್ಥಿ ಮುಖಂಡರಾಗಿ ಭಾಗವಹಿಸಿ ಸೆರೆಮನೆವಾಸ ಅನುಭವಿಸಿದರು. ಸೆರೆಮನೆಯಿಂದ ಹೊರಬಂದ ನಂತರದಲ್ಲಿ ಬಿ. ಎ ಪದವಿ ಪಡೆದರು. ನಂತರದಲ್ಲಿ ಕಾನೂನು ಪದವಿಯನ್ನೂ ಚರಿತ್ರೆ ಮತ್ತು ರಾಜ್ಯಶಾಸ್ತ್ರಗಳಲ್ಲಿ ಸ್ನಾತಕೋತ್ತರ ಪದವಿಗಳನ್ನೂ ಪಡೆದರು.

1946ರ ವರ್ಷದಲ್ಲಿ ಮುಂಬೈ ಶ್ರೇಷ್ಠ ನ್ಯಾಯಾಲಯದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸತೊಡಗಿದ ಚೆನ್ನಬಸಪ್ಪನವರು, 1965ರ ವರ್ಷದಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಂಡರು. ನಿವೃತ್ತಿಯ ನಂತರದಲ್ಲಿ ಕರ್ನಾಟಕ ಶ್ರೇಷ್ಠ ನ್ಯಾಯಾಲಯದಲ್ಲಿ ವಕೀಲಿ ವೃತ್ತಿ ನಡೆಸುವುದರ ಜೊತೆಗೆ ಹಲವಾರು ಕಾರ್ಮಿಕ ಸಂಘಟನೆಗಳ ಮತ್ತು ಭ್ರಷ್ಟಾಚಾರ ನಿರ್ಮೂಲಕ ಸಮಿತಿಯ ಅಧ್ಯಕ್ಷತೆ ಮುಂತಾದ ಹಲವಾರು ಜವಾಭ್ಧಾರಿಗಳನ್ನು ನಿರ್ವಹಿಸಿದರು.

ಅರವಿಂದಾಶ್ರಮದ ನಿಕಟವರ್ತಿಗಳಾದ ಚೆನ್ನಬಸಪ್ಪನವರು ಕರ್ನಾಟಕ ವಿಭಾಗದ ಅರವಿಂದಾಶ್ರಮವನ್ನು ಪ್ರಾರಂಭಿಸಿದರು. ಪ್ರಾರಂಭದಿಂದಲೂ ಸಾಹಿತ್ಯದ ಗೀಳು ಹಚ್ಚಿಕೊಂಡ ಇವರು ನಾಡಿನ ಪ್ರಮುಖ ಪತ್ರಿಕೆಗಳಿಗೆಲ್ಲಾ ಬರೆದ ಲೇಖನಗಳು ಅಪಾರ. ಕನ್ನಡಪ್ರಭ ಪತ್ರಿಕೆಯಲ್ಲಿ ಮೂಡಿಬಂದ ‘ನ್ಯಾಯಾಧಿಶರ ನೆನಪುಗಳು’ ಮತ್ತು ಪ್ರಜಾಮತ ವಾರಪತ್ರಿಕೆಯಲ್ಲಿ ಪ್ರಕಟಗೊಂಡ ‘ನ್ಯಾಯಾಲಯದಲ್ಲಿ ಸತ್ಯ ಕಥೆಗಳು’ ಅಂದಿನ ದಿನಗಳಲ್ಲಿ ಪ್ರಖ್ಯಾತಿ ಪಡೆದಿದ್ದವು.

ಎಂಭತ್ತಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿರುವ ಕೋ. ಚೆನ್ನಬಸಪ್ಪನವರ ಕೃತಿಗಳಲ್ಲಿ, ಸ್ವಾತಂತ್ರ್ಯ ಮಹೋತ್ಸವ, ಪ್ರಾಣಪಕ್ಷಿ, ಜೀವತೀರ್ಥ ಮುಂತಾದ
ಕವನ ಸಂಕಲನಗಳು; ಗಡಿಪಾರು, ನಮ್ಮೂರ ದೀಪ, ಗಾಯಕನಿಲ್ಲದ ಸಂಗೀತ ಮುಂತಾದ ಕಥಾ ಸಂಕಲನಗಳು; ಹಿಂದಿರುಗಿ ಬರಲಿಲ್ಲ, ನೊಗದ ನೇಣು, ರಕ್ತತರ್ಪಣ, ಬೇಡಿ ಕಳಚಿತು-ದೇಶ ಒಡೆಯಿತು ಮೊದಲಾದ ಕಾದಂಬರಿಗಳು; ಶ್ರೀ ಅರವಿಂದರು, ಶ್ರೀ ಮಾತಾಜಿ, ಶ್ರೀ ಮೃತ್ಯುಂಜಯಸ್ವಾಮಿಗಳು ಮೊದಲಾದ ಜೀವನಚರಿತ್ರೆಗಳು; ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ದೃಢಪ್ರತಿಜ್ಞೆ, ಕುವೆಂಪು ವೈಚಾರಿಕತೆ ಮೊದಲಾದ ವಿಮರ್ಶಾ ಗ್ರಂಥಗಳು; ರಕ್ಷಾಶತಕಂ, ಶ್ರೀ ಕುವೆಂಪು ಭಾಷಣಗಳು, ಬಿನ್ನವತ್ತಳೆಗಳು ಮುಂತಾದ ಸಂಪಾದಿತ ಕೃತಿಗಳು ಪ್ರಮುಖವಾಗಿವೆ. ಚೆನ್ನಬಸಪ್ಪನವರ ’ದಾಸರಯ್ಯನ ಪಟ್ಟಿ’, ’ಹಿಂದಿರುಗಿ ಬರಲಿಲ್ಲ’, ’ಬೇಡಿಕಳಚಿತು ದೇಶ ಒಡೆಯಿತು’, ’ನ್ಯಾಯಾದಿsಶನ ನೆನಪುಗಳು’ ಮುಂತಾದ ಕೃತಿಗಳು ಸಾಮಾನ್ಯರಿಂದ ವಿದ್ವಾಂಸರೆಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ..

ಕೋ. ಚೆನ್ನಬಸಪ್ಪನವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಉಗ್ರಾಣ ಪ್ರಶಸ್ತಿ, ಸ.ಸ.ಮಾಳವಾಡ ಪ್ರಶಸ್ತಿ, ಚಿಂತನಶ್ರೀ ಪ್ರಶಸ್ತಿ, ಸಂ.ಶಿ. ಭೂಸನೂರ ಮಠ ಪ್ರಶಸ್ತಿ, ಕನ್ನಡಶ್ರೀ ಪ್ರಶಸ್ತಿ, ವಿಶ್ವಮಾನವ ಪ್ರಶಸ್ತಿ ಮುಂತಾದವುಗಳು ಸಂದಿವೆ. ಇತ್ತೀಚೆಗೆ ಬಿಜಾಪುರದಲ್ಲಿ ಜರುಗಿದ 79ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಗೌರವವನ್ನು ನೀಡುವುದರ ಮೂಲಕ ನಾಡು ಈ ಹಿರಿಯರನ್ನು ಗೌರವಿಸಿದೆ.

ನಿನಗೆ ನೀನೇ ಗೆಳೆಯಾ - ಗೋಪಾಲಕೃಷ್ಣ ಅಡಿಗ

’ನಿನಗೆ ನೀನೇ ಗೆಳೆಯಾ, ನಿನಗೆ ನೀನೇ..! 
ಅವರಿವರ ನಂಬುಗೆಯ ಮಳಲ ರಾಶಿಯ ಮೇಲೆ
ಬಾಳಮನೆಯನು ಮುಗಿಲಿಗೆತ್ತರಿಸಲಿಹೆಯಾ?.
ನಿನಗೆ ನೀನೇ.ಗೆಳೆಯಾ, ನಿನಗೆ ನೀನೇ..!.

ಮನ ಸಿಡಿದು ಹೋಳಾಗುತಿರುವ ವೇಳೆ,
ಕನಸುಗಳ ಗುಳ್ಳೆಗಳು ಒಡೆದೊಡೆದು ಬೀಳೆ
ಜನಮದೀ ರಿಂಗಣದಿ ಕಾಲುಗಳು ಸೋಲೆ,
ನಿನಗೆ ನೀನೇ.ಗೆಳೆಯಾ, ನಿನಗೆ ನೀನೇ!

ಚೆಲುವಿಕೆಯ ಹುಚ್ಚೊಳೆದೆ ಕೊಚ್ಚಿ ಹೋಗುತಿರೆ,
ಒಲವು ವಿರಹದ ಬೆಂಕಿಯಲಿ ಬೇಯುತಿರೆ,
ಗೆಳೆತನಕೆ ಹುಳಿಬಂದು ಹೆಪ್ಪುಗಟ್ಟುತಿರೆ
ನಿನಗೆ..ನೀನೇ..ಗೆಳೆಯಾ,ನಿನಗೆ ನೀನೇ!

ನಿನ್ನೆದೆಯ ಮಾತು ನಿನ್ನೆದೆಯೊಳುಳಿದಿರಲು
ಮಾತು ಮಾತಿಗೂ ವಾದ ಹಡೆಯೆತ್ತಿಬರಲು,
ಅದರ ವಿಷಕೀ ಜೀವ ಬೆಂದು ಹೋಗಿರಲು,
ನಿನಗೆ ನೀನೇ, ಗೆಳೆಯ, ನಿನಗೆ ನೀನೇ !’

Sunday, February 24, 2013

ಬಾ ಇಲ್ಲಿ ಸಂಭವಿಸು - ಕುವೆಂಪು

ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ,
ನಿತ್ಯವೂ ಅವತರಿಪ ಸತ್ಯಾವತಾರ!
ಮಣ್ಣಾಗಿ ಮರವಾಗಿ ಮಿಗವಾಗಿ ಖಗವಾಗಿ
ಭವಭವದಿ ಭವಿಸಿ, ಓ ಭವವಿದೂರ.

ಮಣ್ತನಕೆ ಮರತನಕೆ ಮಿಗತನಕೆ ಖಗತನಕೆ
ಮುನ್ನಡೆಗೆ ಕಣ್ಣಾದ ಗುರುವೆ, ಬಾರ!
ಮೂಡಿ ಬಂದಿಂದೆನ್ನ ನರರೂಪ ಚೇತನದಿ
ನಾರಾಯಣತ್ವಕ್ಕೆ ದಾರಿ ತೋರ!

ಅಂದು ಅರಮನೆಯಲ್ಲಿ, ಮತ್ತೆ ಸೆರೆಮನೆಯಲ್ಲಿ,
ಅಲ್ಲಿ ತುರುಪಟ್ಟಿಯಲಿ, ಇಲ್ಲಿ ಕಿರುಗುಡಿಸಲಲಿ,
ದೇಶದೇಶದಿ ವೇಷವೇಷಾಂತರವನಾಂತು
ವಿಶ್ವಸಾರಥಿಯಾಗಿ ಲೀಲಾರಥವನೆಂತು
ಚೋದಿಸಿರುವೆಯೊ ಅಂತೆ, ಸೃಷ್ಟಿಲೋಲ,

ಅವತರಿಸು ಬಾ ಇಲ್ಲಿ ಇಂದೆನ್ನ ಚೈತ್ಯದಲಿ,
ಹೇ ದಿವ್ಯ ಸಚ್ಚಿದಾನಂದ ಶೀಲ!

Friday, February 22, 2013

ದೇವ, ನಿನ್ನ ಮಾಯೆಗಂಜಿ - ಕೆ. ಎಸ್. ನರಸಿಂಹಸ್ವಾಮಿ

ದೇವ, ನಿನ್ನ ಮಾಯೆಗಂಜಿ
ನಡುಗಿ ಬಾಡೆನು ;
ನಿನ್ನ ಇಚ್ಛೆಯಂತೆ ನಡೆವೆ -
ನಡ್ಡಿ ಮಾಡೆನು.

ಮುಕ್ತಿ ! ಮುಕ್ತಿ ! ನನ್ನ ನಾನು
ತಿಳಿದುಕೊಳ್ವುದೋ,
ಸಾವಿಗಂಜಿ ನಿನ್ನಡಿಯಲಿ
ಅಡಗಿಕೊಳ್ವುದೋ ?

ಶಕ್ತಿಯಿತ್ತೆ ಮುಕ್ತಿಯನ್ನು
ಗಳಿಸಿಕೊಳ್ಳುಲು ;
ನೀರನೆರೆದೆ ಬಳ್ಳಿಯನ್ನು
ಬೆಳಸಿಕೊಳ್ಳಲು;

ಜ್ಞಾನರವಿಯನಿತ್ತೆ ಎದೆಯ
ನೋಡಿಕೊಳ್ಳಲು ;
ಗೀತೆಯನ್ನು ಕೊಟ್ಟೆ ಕೊಳಲೊ -
ಳೂದಿಕೊಳ್ಳಲು.

ಎಲ್ಲವನ್ನು ಕೊಟ್ಟಿರುವೆ;
ಏನ ಬೇಡಲಿ !
ಜಗವನೆನಗೆ ಬಿಟ್ಟಿರುವೆ
ಏಕೆ ಕಾಡಲಿ !

Thursday, February 21, 2013

ಸರ್ವಧರ್ಮ ಪ್ರಾರ್ಥನೆ

ಓಂ ತತ್‌ ಸತ್‌ ಶ್ರೀ ಗುರುನಾರಾಯಣ ನೀ,ಪುರುಷೋತ್ತಮ ಗುರು ನೀ
ಸಿದ್ಧ ಬುದ್ಧ ನೀ ಸ್ಕಂದ ವಿನಾಯಕ, ಸವಿತಾ ಪಾವಕ ನೀ
ಬ್ರಹ್ಮ ಮಜ್ದ್‌ ನೀ ಯಹ್ವ ಶಕ್ತಿ ನೀ, ಈಶು ಪಿತಾ ಪ್ರಭು ನೀ
ರುದ್ರ ವಿಷ್ಣು ನೀ, ರಾಮಕೃಷ್ಣ ನೀ, ರಹೀಮ ತಾಮೋ ನೀ
ವಾಸುದೇವಗೋ ವಿಶ್ವರೂಪನೀ ಚಿದಾನಂದ ಹರಿ ನೀ
ಅದ್ವಿತೀಯ ನೀ ಅಕಾಲ ನಿರ್ಭಯ ಆತ್ಮಲಿಂಗ ಶಿವ ನೀ

Monday, February 18, 2013

ಅಳುವ ಕಡಲೊಳು - ಗೋಪಾಲಕೃಷ್ಣ ಅಡಿಗ

ಅಳುವ ಕಡಲೊಳು ತೇಲಿ ಬರುತಲಿದೆ ನಗೆಯ ಹಾಯಿದೋಣಿ
ಬಾಳ ಗಂಗೆಯ ಮಹಾಪೂರದೊಳು ಸಾವಿನೊಂದು ವೇಣಿ
ನೆರೆತಿದೆ ಬೆರೆತಿದೆ ಕುಣಿವ ಮೊರೆವ ತೆರೆತೆರೆಗಳೋಣಿಯಲ್ಲಿ
ಜನನ ಮರಣಗಳ ಉಬ್ಬು ತಗ್ಗು ಹೊರಳುರುಳುವಾಟವಲ್ಲಿ

ಆಶೆ ಬೂದಿ ತಳದಲ್ಲು ಕೆರಳುತಿವೆ ಕಿಡಿಗಳೆನಿತೋ ಮರಳಿ
ಮುರಿದು ಬಿದ್ದ ಮನ ಮರದ ಕೊರಡೊಳು ಹೂವು ಹೂವು ಅರಳಿ
ಕೂಡಲಾರದೆದೆಯಾಳದಲ್ಲೂ ಕಂಡೀತು ಏಕಸೂತ್ರ
ಕಂಡುದುಂಟು ಬೆಸೆಬೆಸೆಗಳಲ್ಲು ಭಿನ್ನತೆಯ ವಿಕಟ ಹಾಸ್ಯ

ಎತ್ತರೆತ್ತರೆಕೆ ಏರುವ ಮನಕೂ ಕೆಸರ ಲೇಪ, ಲೇಪ;
ಕೊಳೆಯು ಕೊಳೆಚೆಯಲಿ ಮುಳುಗಿ ಕಂಡನೋ ಬಾನಿನೊಂದು ಪೆಂಪ
ತುಂಬುಗತ್ತಲಿನ ಬಸಿರನಾಳುತಿದೆ ಒಂದು ಅಗ್ನಿ ಪಿಂಡ
ತಮದಗಾಧ ಹೊನಲಲ್ಲು ಹೊಳೆಯುತಿದೆ ಸತ್ವವೊಂದಖಂಡ

ಇದನರಿತೆನೆಂದೆಯಾ? ಅರಿವು ಕಿರಣವನೇ ನುಂಗಿತೊಂದು ಮೇಘ
ಅ ಮುಗಿಲ ಬಸಿರನೆ ಬಗೆದು ಬಂತು ನವ ಕಿರಣ ಒಂದಮೋಘ
ಹಿಡಿದ ಹೊನ್ನೇ ಮಣ್ಣಹುದು ಮಣ್ಣೊಳು ಹೊಳೆದುದುಂಟು ಹೊನ್ನು
ಇದು ಹೀಗೆ ಎಂಬ ನಂಬುಗೆಯ ಊರುಗೋಲಿಲ್ಲ ಇನ್ನು ಮುನ್ನು

ಆಶೆ ಎಂಬ ತಳವೊಡೆದ ದೋಣಿಯಲಿ ದೂರ ತೀರ ಯಾನ
ಯಾರ ಲೀಲೆಗೋ ಯಾರೋ ಏನೋ ಗುರಿ ಇರದೆ ಬಿಟ್ಟ ಬಾಣ
ಇದು ಬಾಳು ನೋಡು ಇದ ತಿಳಿದೆನೆಂದರೂ ತಿಳಿದ ಧೀರನಿಲ್ಲ
ಹಲವುತನದ ಮೈಮರೆಸುವಾಟವಿದು ನಿಜವು ತೋರದಲ್ಲ

ಬೆಂಗಾಡು ನೋಡು ಇದು ಕಾಂಬ ಬಯಲು ದೊರಕಿಲ್ಲ ಆದಿ ಅಂತ್ಯ
ಅದ ತಿಳಿದೆನೆಂದ ಹಲರುಂಟು ತಣಿದೆನೆಂದವರ ಕಾಣೆನಯ್ಯಾ
ಅರೆಬೆಳಕಿನಲ್ಲಿ ಬಾಳಲ್ಲಿ ಸುತ್ತಿ ನಾವೇಕೋ ಮಲೆತು ಮೆರೆದು
ಕೊನೆಗೆ ಕರಗುವೆವು ಮರಣ ತೀರ ಘನ ತಿಮಿರದಲ್ಲಿ ಬೆರೆದು

Sunday, February 17, 2013

ಎಂ. ಗೋಪಾಲಕೃಷ್ಣ ಅಡಿಗ

ಡಾ. ಎಂ. ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮೊಗೇರಿ ಎಂಬ ಹಳ್ಳಿಯಲ್ಲಿ 18 ಫೆಬ್ರವರಿ 1918ರಲ್ಲಿ. ಮನೆಯ ಮುಂಜಗಲಿಯ ಮೇಲೆ ಕುಳಿತರೆ ದೂರದಲ್ಲಿ ಮೋಡಗಳಾಚೆ ಕಾಣುವ ಪಶ್ಚಿಮ ಘಟ್ಟಗಳ ಸಾಲು; ಹಿಂಬಾಗಿಲಿನ ಹಿತ್ತಲಿಗೆ ಬಂದರೆ ಅಡಿಕೆ, ಬಾಳೆ, ಸೀಬೆ, ನಿಂಬೆ, ಮಾವು, ಹಲಸು – ಈ ಸಸ್ಯಲೋಕ; ಅಕ್ಕಪಕ್ಕ ತೋಟ ಗದ್ದೆಗಳಲ್ಲಿ ಬೆಳೆದುನಿಂತ ಮರ ಗಿಡ ಪೈರು; ಅಂಗಳದಲ್ಲಿ ನಿಂತು ಕಣ್ಣು ಹಾಯಿಸಿದರೆ ಮೇಲೆ ಕಾಣುವ ಆ ನೀಲ ಲೋಕ; ಅನತಿ ದೂರದಲ್ಲೇ ಪ್ರಕೃತಿ ಚೇಷ್ಟೆಗಳಿಗೆಲ್ಲ ಶೃತಿ ಹಿಡಿದಂತೆ ಸದಾ ಭೋರ್ಗರೆಯುತ್ತ, ಸದಾ ತುಡಿಯುತ್ತ ಸ್ಥಾಯಿಯಾಗಿ ಇರುವ ಸಮುದ್ರ – ಈ ಎಲ್ಲ ವಿಸ್ಮಯ, ವಿಚಿತ್ರ ವೈಭವಗಳ ನಡುವೆ ಅಡಿಗರ ಬಾಲ್ಯ ಕಳೆಯಿತು. ಚಿಕ್ಕಂದಿನ ಎಳೆಯ ಮನಸ್ಸಿನಲ್ಲಿ ಈ ಎಲ್ಲವೂ ಒತ್ತಿ ಮುದ್ರೆ, ಬೀರಿದ ಪ್ರಭಾವ ಮುಂದೆ ಅವರ ಕಾವ್ಯಪ್ರಪಂಚಕ್ಕೆ ಸೂಕ್ತ ಹಿನ್ನೆಲೆಯನ್ನೂ ಅಗತ್ಯ ಪರಿಸರವನ್ನೂ ಒದಗಿಸಿವೆ.

ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ. ಅವರ ಹತ್ತಿರದ ಬಂಧುಗಳೊಬ್ಬರು ಅವರ ಮನೆಯಲ್ಲೇ ಇದ್ದು ಯಕ್ಷಗಾನ ಪ್ರಸಂಗಗಳನ್ನು ಬರೆಯುತ್ತಿದ್ದರಂತೆ. ಮನೆಯಲ್ಲಿ ಪದ್ಯ ರಚನೆ, ವಾಚನಗಳ ವಾತಾವರಣವಿತ್ತು. ಪ್ರತಿರಾತ್ರಿಯೂ ಅವರ ಸೋದರತ್ತೆ ನಾರಣಪ್ಪನ ಭಾರತ, ತೊರವೆ ರಾಮಾಯಣ, ಜೈಮಿನಿ ಭಾರತ ಇವುಗಳನ್ನು ರಾಗವಾಗಿ ಓದಿ ಹೇಳುತ್ತಿದ್ದರೆಂದು ಅಡಿಗರು ನೆನೆಸಿಕೊಳ್ಳುತ್ತಿದ್ದರು. 

ದಕ್ಷಿಣ ಕನ್ನಡ ಜಿಲ್ಲೆ ಯಕ್ಷಗಾನದ ತವರೂರು. ಚಿಕ್ಕಂದಿನಲ್ಲಿ ಅಡಿಗರು ಯಕ್ಷಗಾನ ಪ್ರಸಂಗಗಳು ಸುತ್ತಮುತ್ತ ಎಲ್ಲಿ ನಡೆದರೂ ತಪ್ಪಿಸಿಕೊಳ್ಳದೆ ನೋಡುತ್ತಿದ್ದರಂತೆ. ಆ ಹಾಡುಗಳ, ಮಟ್ಟುಗಳ ಕುಣಿತದ ಭಂಗಿಗಳು ಅವರ ಮನಸ್ಸಿನಲ್ಲಿ ಸದಾ ಅನುರಣನಗೊಳ್ಳುತ್ತಿತ್ತಂತೆ.

“ಈ ವಾತಾವರಣದಲ್ಲಿ ನಾನು ನನ್ನ ಹದಿಮೂರನೇ ವಯಸ್ಸಿನಲ್ಲಿ ಪದ್ಯರಚನೆಗೆ ಕೈಹಾಕಿದೆನೆಂದು ತೋರುತ್ತದೆ. ಭಾಮಿನಿಷಟ್ಪದಿ, ವಾರ್ಧಕ ಷಟ್ಪದಿ ಕಂದ ಪದ್ಯಗಳನ್ನು ರಚಿಸುತ್ತಿದ್ದೆ” ಎಂದು ಅಡಿಗರೇ ಹೇಳಿದ್ದಾರೆ. ಅಂದರೆ ಸುಮಾರು 1931-32ರ ವೇಳೆಗೆ ಅಡಿಗರು ಕಾವ್ಯರಚನೆ ಆರಂಭಿಸಿದಂತೆ ತೋರುತ್ತದೆ.

ಅಡಿಗರು ತಮ್ಮ ಪ್ರಾರಂಭದ ವಿದ್ಯಾಭ್ಯಾಸವನ್ನು ದಕ್ಷಿಣ ಕನ್ನಡದಲ್ಲಿ ಮುಗಿಸಿ, ನಂತರ ಮೈಸೂರಿಗೆ ಬಂದರು. ಬಿ. ಎ (ಆನರ್ಸ್), ಎಂ.ಎ (ಇಂಗ್ಲಿಷ್) ಪದವಿಗಳನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದ ಅವರು ಮೈಸೂರಿನ ಶಾರದಾ ವಿಲಾಸ ಕಾಲೇಜು, ಸೆಂಟ್ ಫಿಲೋಮಿನಾ ಕಾಲೇಜು ಹಾಗೂ ಕುಮುಟಾದ ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಕೆಲಸ ಮಾಡಿದರು. ನಂತರ ಉಡುಪಿಯ ಪೂರ್ಣಪ್ರಜ್ಞ ಕಾಲೇಜು, ಸಾಗರದ ಲಾಲ್ ಬಹಾದೂರ್ ಶಾಸ್ತ್ರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡಿದ ಅಡಿಗರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ನ ರಿಸರ್ಚ್ ಫೆಲೋ ಆಗಿ ಕೆಲಸ ಮಾಡಿ ತಮ್ಮ ವಿಶ್ರಾಂತ ಬದುಕನ್ನು ಬೆಂಗಳೂರಿನಲ್ಲಿ ಕಳೆದು, ದಿನಾಂಕ 14-11-1992ರಲ್ಲಿ ನಿಧನರಾದರು.

ಐವತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೌರವಿಸಲ್ಪಟ್ಟ ಅಡಿಗರು ರಾಜ್ಯ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕೇರಳದ ಕುಮಾರ್ ಆಸಾನ್ ಪ್ರಶಸ್ತಿ, ಕಬೀರ್ ಸಂಮಾನ್ ಪ್ರಶಸ್ತಿಗಳನ್ನು ಪಡೆದರು. ‘ಸಾಕ್ಷಿ’ ಪತ್ರಿಕೆಯ ಸಂಪಾದಕರಾಗಿ ಹೊಸ ಸಂವೇದನೆ ಹಾಗೂ ಹೊಸ ಅಭಿವ್ಯಕ್ತಿ ವಿಧಾನಗಳಿಗೆ ಮಾರ್ಗದರ್ಶಕರಾದ ಅಡಿಗರು “ತಮ್ಮ ಕಿರಿಯ ತಲೆಮಾರಿನವರ ಮೇಲೆ ಬೀರಿದ ಪ್ರಭಾವ, ಅವರ ಓರಗೆಯ ಮತ್ತು ಹಿರಿಯ ತಲೆಮಾರಿನವರಿಗೆ ಒಡ್ಡಿದ ಸವಾಲುಗಳು ಕನ್ನಡ ಆಧುನಿಕ ಸಾಹಿತ್ಯ ಚರಿತ್ರೆಯಲ್ಲಿ ಮಹತ್ವದ ಸಂಗತಿಯಾಗಿದೆ.

ಅಡಿಗರ ಮೊದಲ ಕವನ ಸಂಕಲನ ‘ಭಾವತರಂಗ’ ಪ್ರಕಟವಾದದ್ದು 1946ರಲ್ಲಿ. ನಂತರದಲ್ಲಿ ಅವರ ಹನ್ನೊಂದು ಕವನ ಸಂಕಲನಗಳು ಪ್ರಕಟವಾದವು. ಕಟ್ಟುವೆವು ನಾವು (1948), ನಡೆದು ಬಂದ ದಾರಿ (1952), ಚಂಡೆಮದ್ದಳೆ (1954), ಭೂಮಿಗೀತ (1959), ವರ್ಧಮಾನ (1972), ಇದನ್ನು ಬಯಸಿರಲಿಲ್ಲ (1975), ಮೂಲಕ ಮಹಾಶಯರು (1981), ಬತ್ತಲಾರದ ಗಂಗೆ (1983), ಚಿಂತಾಮಣಿಯಲ್ಲಿ ಕಂಡ ಮುಖ (1987), ಸುವರ್ಣ ಪುತ್ಥಳಿ (1990) ಹಾಗೂ ಬಾ ಇತ್ತ ಇತ್ತ (1993) ಪ್ರಕಟವಾಗಿವೆ. 1937ರಿಂದ 1976ರವರೆಗಿನ ಎಲ್ಲ ಸಂಕಲನಗಳನ್ನೂ ಒಳಗೊಂಡ ಅವರ ಸಮಗ್ರ ಕಾವ್ಯ 1987ರಲ್ಲಿ ಪ್ರಕಟವಾಗಿದೆ. ಅಡಿಗರು ಅನಾಥೆ, ಆಕಾಶದೀಪ ಎಂಬ ಎರಡು ಕಾದಂಬರಿಗಳನ್ನೂ ಬರೆದಿದ್ದಾರೆ. ಅನೇಕ ಅನುವಾದ ಕೃತಿಗಳೂ ಪ್ರಕಟವಾಗಿವೆ.

ಸಾಹಿತ್ಯ, ಸಂಸ್ಕೃತಿ, ಶಿಕ್ಷಣ, ರಾಜಕೀಯ ಹೀಗೆ ವಿವಿಧ ವಿಷಯಗಳ ಬಗ್ಗೆ ಅಡಿಗರು ಅನೇಕ ಲೇಖನಗಳನ್ನು ಬರೆದಿದ್ದಾರೆ. ಅವರ ಈ ಎಲ್ಲ ವೈಚಾರಿಕ ಲೇಖನಗಳೂ ‘ಸಮಗ್ರಗದ್ಯ’ ಎಂಬ ಸಂಪುಟವೊಂದರಲ್ಲಿ ಪ್ರಕಟವಾಗಿದೆ. ಅವರ ಗದ್ಯಬರಹಗಳನ್ನು ಕುರಿತು ಅವರೇ ಹೀಗೆ ಹೇಳುತ್ತಾರೆ: “ವಿಚಾರ ಪ್ರಧಾನವಾದ ಈ ಪ್ರಬಂಧಗಳಲ್ಲಿ ನಾನು ನನ್ನ ಕಾವ್ಯಗಳಲ್ಲಿ ಹೇಳದೆ ಇರುವುದು ಯಾವುದೂ ವ್ಯಕ್ತಗೊಂಡಿಲ್ಲ. ಅಲ್ಲಿ ಅನುಭವ ಚಿತ್ರಗಳಾಗಿ ವ್ಯಕ್ತಗೊಂಡ ವಿಚಾರಗಳು, ಕಲ್ಪನೆಗಳು ಇಲ್ಲಿ ಪ್ರಜ್ಞೆಯ ಸ್ತರದಲ್ಲಿ ಶುದ್ಧ ಗದ್ಯದಲ್ಲಿ ಸ್ಪಷ್ಟತೆ, ಸ್ಪುಟತೆ, ಅಸಂದಿಗ್ಧತೆಗಳನ್ನೇ ಗುರಿಯಾಗಿಟ್ಟುಕೊಂಡು ಪ್ರಕಟವಾಗಿವೆ”. ಅಡಿಗರು ಕೆಲವು ಸಣ್ಣಕಥೆಗಳನ್ನೂ ಬರೆದಿದ್ದಾರೆ. ಒಮ್ಮೆ ಬೆಂಗಳೂರು ಕ್ಷೇತ್ರದಿಂದ ಲೋಕಸಭಾ ಚುನಾವಣೆಗೂ ಸ್ಪರ್ಧಿಸಿದ್ದರು.

ಅಡಿಗರ ಸಮಗ್ರ ಕಾವ್ಯವನ್ನು ಓದಿದಾಗ ‘ಆಧುನಿಕ ಮಹಾಕಾವ್ಯ’ವೊಂದನ್ನು ಓದಿದ ಅನುಭವವಾಗುತ್ತದೆ. ಇವರ ಕಾವ್ಯದ ನಾಯಕ ಇಪ್ಪತ್ತನೇ ಶತಮಾನದ ಸ್ವಾತಂತ್ರೋತ್ತರ ಭಾರತದ ಆಧುನಿಕ ಸಂವೇದನೆಯ ವ್ಯಕ್ತಿ. ಸ್ವತಂತ್ರ ಭಾರತದ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ವಾಸ್ತವ ಅಡಿಗರ ಕಾವ್ಯದಲ್ಲಿ ಆಕಾರ ಪಡೆದಂತೆ ಬಹುಶಃ ಕನ್ನಡದಲ್ಲಿ ಮತ್ತೆ ಯಾರ ಕಾವ್ಯದಲ್ಲೂ ಕಾಣಿಸಿಕೊಂಡಿಲ್ಲವೆನ್ನಬಹುದು. ಅಡಿಗರ ಕಾವ್ಯನಾಯಕನ ಕೆಲವು ಲಕ್ಷಣಗಳನ್ನೂ ಹೀಗೆ ಗುರುತಿಸಬಹುದು: ಸಾಂಪ್ರದಾಯಿಕವಾದ ಒಪ್ಪಿತ ಮೌಲ್ಯಗಳ ಬಗ್ಗೆ ಈತನಿಗೆ ಆರಾಧಕ ಮನೋಭಾವವಿಲ್ಲ. ಹಾಗೆಂದು ಅವುಗಳನ್ನು ಈತ ಸಾರಾಸಗಟಾಗಿ ತಿರಸ್ಕರಿಸುವಂಥವನೂ ಅಲ್ಲ. ಚಿಕಿತ್ಸಕ ಮನೋಭಾವದ ಈತನಿಗೆ ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಪರಂಪರೆಯನ್ನು ಸೂಕ್ತವಾಗಿ ಒಗ್ಗಿಸಿಕೊಳ್ಳುವುದರ ಬಗ್ಗೆ ಆಸಕ್ತಿ. ಅನೇಕ ನವ್ಯಕೃತಿಗಳಲ್ಲಿ ಕಾಣಿಸುವಂತೆ ಅಡಿಗರ ನಾಯಕ ಸೂಕ್ಷ್ಮ ಮನಸ್ಸಿನ ದುರ್ಬಲ ವ್ಯಕ್ತಿಯಲ್ಲ. ಈತನೊಬ್ಬ ಹೋರಾಟಗಾರ. ಎಲ್ಲ ಬಗೆಯ ಸರ್ವಾಧಿಕಾರೀ ಶಕ್ತಿಗಳ ವಿರುದ್ಧವೂ ಈತ ಪ್ರತಿಭಟಿಸುತ್ತಾನೆ. ಈ ಪ್ರತಿಭಟನೆ ಆತ್ಮ ವಿಶ್ಲೇಷಣೆಯ ಪ್ರಕ್ರಿಯೆಯೂ ಆಗುತ್ತದೆ. ಎಲ್ಲ ರೀತಿಯ ಆಕ್ರಮಣಗಳನ್ನೂ ಎದುರಿಸಿ ವ್ಯಕ್ತಿವಿಶಿಷ್ಟತೆಯನ್ನು ಕಾಪಾಡಿಕೊಳ್ಳುವ ಬಗ್ಗೆ ಈತನ ತುಡಿತ. 

ಅಡಿಗರ ಮೊದಲ ಕವನ ಸಂಕಲನ ‘ಭಾವತರಂಗ’ದ ಮುನ್ನುಡಿಯಲ್ಲಿ ಬೇಂದ್ರೆಯವರು ಹೀಗೆ ಹೇಳಿದ್ದಾರೆ: “ನಾನು ಕವಿತೆಗಳನ್ನು ಬರೆಯಲು ಆರಂಭಿಸಿದಾಗ ಇದ್ದ ಶೈಲಿಯ ಪ್ರಾಯೋಗಿಕತೆ ಇಂದಿನ ಕನ್ನಡದಲ್ಲಿ ಅಷ್ಟುಮಟ್ಟಿಗೆ ಇಲ್ಲ. ಒಂದು ಬಗೆಯ ಸಿದ್ಧ ಶೈಲಿಯಿಂದ ನವಕವಿಗಳು ಹೊರಡುತ್ತಾರೆ. ಗೆಳೆಯ ಗೋಪಾಲಕೃಷ್ಣರಿಗೆ ಅವರ ವಯಸ್ಸಿಗಿದ್ದ ಶೈಲಿಯ ಪಾಕ ನನಗೆ ಆ ವಯಸ್ಸಿಗೆ ಇರಲಿಲ್ಲ. ಆದರೆ ನಮಗೆ ಆ ಕಾಲಕ್ಕೆ ಇದ್ದ ನಾವೀನ್ಯದ ಅನುಕೂಲ ಈಗಿನವರಿಗಿಲ್ಲ”. ಬೇಂದ್ರೆಯವರು ಹೇಳುವಂತೆ ಆ ಕಾಲಕ್ಕಾಗಲೇ ಕನ್ನಡ ಕಾವ್ಯ ಸಂದರ್ಭದಲ್ಲಿ ಸಿದ್ಧಶೈಲಿಯೊಂದು ರೂಪುಗೊಂಡಿತ್ತು. ನವೋದಯ ಕಾವ್ಯ ಸಂಪ್ರದಾಯದ ಅತ್ಯುತ್ತಮ ಕಾವ್ಯ ಸೃಷ್ಟಿಯಾಗಿತ್ತು. 1926ರ ವೇಳೆಗೆ ಬಿ.ಎಂ.ಶ್ರೀ ಅವರು ತೋರಿಸಿಕೊಟ್ಟ ಮಾರ್ಗದಲ್ಲಿ ಮನ್ನಡೆದ ಕನ್ನಡ ಕಾವ್ಯ ಒಂದು ಸ್ಪಷ್ಟ ರೂಪ ಪಡೆದು ಮಹತ್ವದ ಸಂಕಲನಗಳು ಆ ವೇಳೆಗಾಗಲೇ ಪ್ರಕಟವಾಗಿದ್ದವು. ಹೊಸದಾಗಿ ಬರೆಯಲು ಆರಂಭಿಸುವ ತರುಣರಿಗೆ ಒಂದು ಕಾವ್ಯ ಮಾದರಿ ಕಣ್ಣೆದುರಿಗಿತ್ತು. ಈ ಮಾದರಿಯನ್ನು ಬಿಟ್ಟು ಹೊಸದಾರಿ ಕಂಡುಕೊಳ್ಳುವುದು, ತನ್ನತನವನ್ನು ರೂಪಿಸಿಕೊಳ್ಳುವುದು ಅಡಿಗರು ಕಾವ್ಯರಚನೆಯ ಆರಂಭದಲ್ಲಿ ಎದುರಿಸಿದ ಬಹುಮುಖ್ಯ ಸಮಸ್ಯೆಯಾಗಿದ್ದಂತೆ ತೋರುತ್ತದೆ.

ಅನ್ಯರೊರೆದುದನೆ ಬರೆದುದನೆ ನಾ ಬರೆಬರೆದು
ಬಿನ್ನಗಾಗಿದೆ ಮನವು, ಬಗೆಯೊಳಗನೇ ತೆರೆದು
ನನ್ನ ನುಡಿಯೊಳೆ ಬಣ್ಣ ಬಣ್ಣದಲಿ ಬಣ್ಣಿಸುವ
ಪನ್ನತಿಕೆ ಬರುವನಕ ನನ್ನ ಬಾಳಿದು ನರಕ (ನನ್ನ ನುಡಿ)

“ಭಾವತರಂಗದ ಮೊದಲ ಕವಿತೆಯಲ್ಲಿಯೇ ತನ್ನತನವನ್ನು ಕಂಡುಕೊಳ್ಳುವ ಮನೋಭಾವವನ್ನು ಅಡಿಗರು ಸ್ಪಷ್ಟವಾಗಿ ಸೂಚಿಸಿದ್ದಾರೆ. ಇಲ್ಲಿ ಎರಡು ಮುಖ್ಯ ಅಂಶಗಳನ್ನು ನಾವು ಗಮನಿಸಬೇಕು. (೧) ಬಗೆಯೊಳಗನೇ ತೆರೆದು, (೨) ನನ್ನ ನುಡಿಯೊಳೆ. ಅಡಿಗರು ಹೇಳುವ ಈ ಎರಡು ಸಂಗತಿಗಳು ಅವರ ಇಡೀ ಕಾವ್ಯದ ಸ್ವರೂಪವನ್ನು ಅರ್ಥ ಮಾಡಿಕೊಳ್ಳಲು ನೆರವಾಗುವ ಬೀಜರೂಪದ ಮಾತುಗಳಾಗಿವೆ. ವಸ್ತು ಹಾಗೂ ಅಭಿವ್ಯಕ್ತಿ ಎರಡರಲ್ಲೂ ಹೊಸದನ್ನು ಸಾಧಿಸಬೇಕೆಂಬ ಹಂಬಲವನ್ನು ನಾವಿಲ್ಲಿ ಕಾಣಬಹುದಾಗಿದೆ.


ಅಡಿಗರ ಆರಂಭದ ಕವಿತೆಗಳ ಮುಖ್ಯಗುಣ-ಭಾವತೀವ್ರತೆ. “ಮಹಾರಾಜ ಕಾಲೇಜು ಆ ಕಾಲದ ಸಂಸ್ಕೃತಿಯ ಒಂದು ಮುಖ್ಯ ಕೇಂದ್ರವಾಗಿ ಎಲ್ಲ ಸೃಜನಾತ್ಮಕ ಚಟುವಟಿಕೆಗಳಿಗೂ ಮಾತೃಸ್ಥಾನವಾಗಿತ್ತು. ಅಲ್ಲಿದ್ದಾಗಲೇ ನಾನು ನಿಜವಾದ ಭಾವಪ್ರಧಾನ ಕವನಗಳನ್ನು ರಚಿಸತೊಡಗಿದ್ದು.” ಎಂದು ಅಡಿಗರು ಹೇಳಿದ್ದಾರೆ. ಭಾವತರಂಗದ ಹೆಸರೇ ಸೂಚಿಸುವಂತೆ ಅಡಿಗರ ಕಾವ್ಯ ಇಲ್ಲಿ ಭಾವದ ಅಲೆಯ ಮೇಲೆ ನಿರಾಯಾಸ ತೇಲಿದೆ.


ವಿಧಿಯೇ ನಿನ್ನಿದಿರು ಮಾರಾಂತು ಹೋರಾಡಿ ಕೆ
ಚ್ಚೆದೆತನದ ಬಲ್ಮೆಯನು ಬಿತ್ತರಿಪೆನು
ಪದವನಿಡುತೆನ್ನೆದೆಯ ಮೇಲೆ ತಾಂಡವವೆಸಗು
ಬೆದರುವೆನೆ ಬೆಚ್ಚುವೆನೆ ನಿನಗೆ ನಾನು (ವಿಧಿಗೆ)


ಈ ಕೆಚ್ಚು, ಹೋರಾಟದ ಆಹ್ವಾನ ಅಡಿಗರ ಮನೋಭಾವಕ್ಕೆ ಸಹಜವಾದುದೆನ್ನಿಸಿದರೂ ಅದು ಪ್ರಕಟಗೊಂಡಿರುವ ಬಗೆ ಸಂಪೂರ್ಣವಾಗಿ ಭಾವಾವೇಶದಿಂದ ಬಂದದ್ದು. ಮುಂದೆ ಅಡಿಗರು ಗೆಲ್ಲಲು ಬಯಸಿದ್ದು ವಿರೋಧಿಸಿದ್ದು ಇಂಥ ರೀತಿಯನ್ನೇ. ದ್ವಿತೀಯ ಪ್ರಾಸ, ಮಾರಾಂತು, ಬಿತ್ತರಿಪೆನು, ಎಸಗು ಮೊದಲಾದ ಪದಪ್ರಯೋಗಗಳ ಬಳಕೆಯನ್ನು ನಾವಿಲ್ಲಿ ಗಮನಿಸಬೇಕು.


ಹೊಸಹಾದಿಯನು ಹಿಡಿದು ನಡೆಯಣ್ಣ ಮುಂದೆ
ಹೊಸ ಜೀವ ಹೊಸ ಭಾವ ಹೊಸ ವೇಗದಿಂದೆ
ಅಂಜದಿರು ಗೆಳೆಯ ಹೊಸಹಾದಿಯನು ಹಿಡಿಯೆ
ಮಂಜುತರ ಸೃಷ್ಟಿಗಾನದಲಿ ಮೈಮೆರೆಯೆ
ಎಂಜಲಾಗದ ಮಧುರ ಮಧುರಸವ ಸವಿಯೆ
ರಂಜಿಸುವ ಕಾಡುಮೇಡುಗಳನಂಡಲೆಯೆ (ಹೊಸಹಾದಿ)


ಹೊಸ ಹಾದಿಯನ್ನು ಹಿಡಿಯಬೇಕೆಂಬ ಹಂಬಲವನ್ನು ವ್ಯಕ್ತಪಡಿಸುವ ಈ ಮಾತುಗಳು ಸಹ ಭಾವಾವೇಶದ ಮನೋಭಾವದ ನೆಲೆಯಿಂದಲೇ ಮೂಡಿಬಂದಿವೆ. ಅಡಿಗರ ಈ ಆವೇಶ ಉತ್ಸಾಹ ಕ್ರಮೇಣ ವ್ಯಾವಹಾರಿಕ ಜಗತ್ತಿನ ಆಕ್ರಮಣದಿಂದಾಗಿ ಆಘಾತಕ್ಕೊಳಗಾಗದಂತೆ ಕಂಡುಬರುತ್ತದೆ. ಬಾಲ್ಯದ ಮುಗ್ಧಲೋಕ, ಹದಿಹರಯದ ಹೊಂಗನಸಿನ ಜಗತ್ತು ಒಡೆದು ಛಿದ್ರವಾಗಿ ಕವಿಮನಸ್ಸು ವ್ಯಗ್ರವಾಗುತ್ತದೆ, ದಿಕ್ಕೆಡುತ್ತದೆ.


ಇಂಥ ಬಾಲ್ಯ ಕಳೆದ ಬಳಿಕ ಬಂದಾ ಹರೆಯ
ದುಲ್ಕೆಯಿದು ಥಟ್ಟನೆ ಪಳಂಚಲೆದೆಗೆ
ಅಲೆಅಲೆಗಳೆದ್ದು ಬಗೆ ಕದಡಿ ಹೋದುದು ಶಾಂತ
ಸರದೊಳಾವುದೋ ಕಲ್ಲು ಬಿದ್ದ ಹಾಗೆ

ಹಲವು ತಾನಗಳ ಸಂತಾನವಾದುದು ಮಧುರ
ನೊಳಬಾಳು; ಹರಯದೊಡ್ದೋಲಗದಲಿ
ತನೆಗೆಲ್ಲಿ ನೆಲೆ? ಬಾಳಹಾಡಿಗೆಲ್ಲಿಹುದು ಬೆಲೆ?
ಎಂದು ಮುರುಟಿದನು ತನುಮನಗಳಲ್ಲಿ (ಒಳತೋಟಿ)


ಅತ್ಯುತ್ಸಾಹ ಇಲ್ಲಿ ತಲ್ಲಣದ ದನಿಯಾಗುತ್ತದೆ. ಆವೇಶ ಹದಗೊಂಡು ನೋವು ಮನಸ್ಸನ್ನು ಆಕ್ರಮಿಸುತ್ತದೆ. ‘ತನ್ನನೆಲೆ’ಯನ್ನು ಹುಡುಕಿಕೊಳ್ಳುವ ತವಕದಲ್ಲಿ ಕವಿಮನಸ್ಸು ಅಸ್ವಸ್ಥಗೊಳ್ಳುತ್ತದೆ. ಇಂತಹ ಸ್ಥಿತಿಯಲ್ಲಿ ಸಹಜವಾಗಿ ತಂಪೆದೆಗೆ ಸಮಾಧಾನ ನೀಡಬಹುದಾದ ಪ್ರೀತಿ ಸ್ನೇಹಗಳಿಂದಲೂ ಕವಿ ವಂಚಿತರಾದಂತೆ ತೋರುತ್ತದೆ.


ಕಂಡು ಮಾತನಾಡಿ ಮೈ
ದಡವಿ ನಗಿಸಿ ನಲಿವರಿಲ್ಲ
ಬೆಂದ ಬಗೆಗೆ ಸೊದೆಯನೆರೆದು
ಕಂಬನಿಯ ತೊಡೆವರಿಲ್ಲ (ಗಾಳಿಯೊಡನೆ)


ಮಾನವ ಸಹಜ ಸಂಬಂಧಗಳಿಂದ ದೊರಕಬಹುದಾಗಿದ್ದ ಪ್ರೀತಿಯಿಂದ ವಂಚಿತರಾದ ಕವಿ ಹೇಳುತ್ತಾರೆ:


ಕಲ್ಲಾಗು ಕಲ್ಲಾಗು ಬಾಳ ಬಿರಿಗಾಳಿಯಲ್ಲಿ 
ಅಲ್ಲಾಡದೆಯೆ ನಿಲ್ಲು ಜೀವ (ಕಲ್ಲಾಗು ಕಲ್ಲಾಗು)


ಹತಾಶೆಯ ಸ್ಥಿತಿಯಲ್ಲಿ ಕವಿ ಮನಸ್ಸು ನಿಷ್ಟುರವಾಗಲು ಪ್ರಯತ್ನಿಸುತ್ತದೆ. ಇಂಥ ಸ್ಥಿತಿಯಲ್ಲಿ ಹರಯದ ಮನಸ್ಸನ್ನು ಸಹಜವಾಗಿ ಸೆಳೆಯಬಹುದಾಗಿದ್ದ ಹೆಣ್ಣಿನ ಸ್ನೇಹ ಕವಿಗೆ ಕಪಟವೆನಿಸುತ್ತದೆ. ಕವಿ ಅನುಭವಿಸುವ ಈ ಹತಾಶ ಸ್ಥಿತಿ ಸ್ವಾನುಕಂಪೆಯಾಗಿ ಕರುಣಾಜನಕ ಸ್ಥಿತಿ ತಲುಪದೆ, ತನ್ನನ್ನು ತಾನು ಅರ್ಥಮಾಡಿಕೊಳ್ಳುವ ಸಾಧನವಾಗಿ, ಏಕಾಗ್ರತೆಗೆ ಧ್ಯಾನಕ್ಕೆ ಹಿನ್ನೆಲೆಯಾಗಿ ನಿಲ್ಲುವಲ್ಲಿ ಅಡಿಗರ ಕಾವ್ಯದ ಸತ್ವವಿದೆ. ಈ ಹಂತದಲ್ಲಿ ಅಡಿಗರ ಕಾವ್ಯ ‘ಬಗೆಯೋಳಗನೇ ತೆರೆದು ನೋಡುವ’ ರೀತಿಯದಾಗುತ್ತದೆ.


ಒಲವೆಯೆಂದು ನಲವೆಯೆಂದು ನಾವು ಹುಸಿಯ ಮುಸುಕನು
ತೊಡಿಸಿ ನಿಜಕೆ ಮೆರೆವೆವು
ಒಲವು ಸುಳ್ಳು ನಲವು ಜಳ್ಳು ನಮ್ಮ ನಾವೆ ವಂಚಿಸುವೆವು
ಇಲ್ಲದುದನೆ ಹೊರೆವೆವು
ನಾನೆ ನನ್ನ ನಲ್ಲ ನಲ್ಲೆ ಒಲುಮೆ ಸಂಭ್ರಮ
ಉಳಿದುದೆಲ್ಲ ವಿಭ್ರಮ (ಬಿಡುಗಡೆಯ ಹಾಡು)


ಎಂದು ಹೇಳುವಲ್ಲಿ ಕವಿ ಪ್ರೀತಿ-ಸ್ನೇಹಗಳ ಬದುಕನ್ನು ಭ್ರಮೆಯೆಂದು ಕರೆದು ಅದನ್ನು ನಿರಾಕರಿಸುತ್ತಾರೆ. ಅಷ್ಟೇ ಅಲ್ಲ ಇವುಗಳಿಂದೆಲ್ಲ ದೂರ ಹೋಗಲು ಬಯಸುತ್ತಾರೆ:

ಓಡಲೆಳಸುತಿಹುದು ಜೀವ ದೂರ ದೂರ ಜನವಿದೂರ
ವಿಪಿನದೆಡೆಗೆ (ಓಡಲೆಳಸುತಿಹುದು)


ಸ್ನೇಹ-ಪ್ರೀತಿ, ಕೋಪ-ತಾಪ, ಅಳು-ನಗು ಎಲ್ಲವನ್ನೂ ನಿರಾಕರಿಸಿ ಜನವಿದೂರ ಹೋಗಬಯಸುವ ಈ ಕಾವ್ಯ ಬದುಕನ್ನೇ ನಿರಾಕರಿಸುವಂಥದಾಗಿ ತೋರುವುದು ಮೇಲ್ನೋಟಕ್ಕೆ ಸಹಜ. ಆದರೆ ಮೇಲ್ಪದರದ ಈ ಆಕ್ರೋಶದ ಹಿಂದಿನ ಆಳವಾದ ವಿಷಾದ ವಾಸ್ತವ ಬದುಕಿನ ಸ್ವೀಕರಣೆಯ ಕಡೆ ಮುಖಮಾಡಿದೆ. ಬದುಕಿನಲ್ಲಿ ಹಿರಿಯಾಸೆ ಹೊತ್ತ ಮಹತ್ವಾಕಾಂಕ್ಷೆಯ ಕವಿ ಮೋಹದ ಸುಳಿಯೊಳಗೆ ಸಿಲುಕಬಾರದೆಂಬ ಎಚ್ಚರದಿಂದ ಇವೆಲ್ಲವನ್ನೂ ಮೀರಲು ಬಯಸುತ್ತಾರೆ. ಕವಿಯ ಈ ಮಹತ್ವಾಕಾಂಕ್ಷೆ ಉನ್ನತವಾದುದ್ದನ್ನು ತನ್ನದಾಗಿರಿಸಿಕೊಳ್ಳಬೇಕೆಂಬ ಬಯಕೆ – ಇದರಿಂದಾಗಿ ಅಡಿಗರ ಕಾವ್ಯ ದೈನಿಕ ಸಹಜ ವಿವರಗಳಿಂದ, ಬದುಕಿನ ವೈವಿಧ್ಯದಿಂದ, ಕೌಟುಂಬಿಕ ಜಗತ್ತಿನಿಂದ ವಂಚಿತವಾಗುತ್ತದೆ. ದಿನನಿತ್ಯದ ನೋವು, ನಲಿವು, ಉತ್ಸಾಹ, ಚೆಲುವು ಇವೆಲ್ಲವೂ ಅವರ ಕಾವ್ಯದಲ್ಲಿ ಇಲ್ಲವೆನ್ನುವಷ್ಟು ಕಡಿಮೆ. ಕವಿ ಬದುಕಿನ ಸ್ನೇಹ, ಪ್ರೀತಿ, ಚೆಲುವು, ಒಲವುಗಳಿಗೆ ಜಡರೇನೂ ಅಲ್ಲ. ಅವರ ಮನಸ್ಸು ಅದರಿಂದ ಮುದಗೊಳ್ಳುತ್ತದೆ. ಆದರೆ ಒಟ್ಟು ಕಾವ್ಯದ ಸಂದರ್ಭದಲ್ಲಿ ಅಂಥ ಕವಿತೆಗಳು ಅಮುಖ್ಯವಾಗುತ್ತವೆ. ಅಡಿಗರದು ಮುಖ್ಯವಾಗಿ ಧ್ಯಾನರೂಪೀ ಮನಸ್ಸು. ಅವರದೇ ಮಾತಿನಲ್ಲಿ ಹೇಳುವುದಾದರೆ – ‘ಹುತ್ತಗಟ್ಟಿದ ಚಿತ್ತ’.

ಬದುಕಿನಲ್ಲಿ ತಾನು ಅನುಭವಿಸಿದ ನೋವು, ಅಪಮಾನ, ಪ್ರೀತಿಯ ಕೊರತೆ-ಸ್ವಭಾವತಃ ಅಂತರ್ಮುಖಿಯಾದ ಕವಿಯನ್ನು ಮತ್ತಷ್ಟು ಅಂತರ್ಮುಖಿಯಾಗುವಂತೆ ಮಾಡುತ್ತವೆ. ಆದರೆ ಈ ಅಂತರ್ಮುಖತೆ ಹೊರಜಗತ್ತಿನ ಜೊತೆ ಸಂಪರ್ಕ ಕಡಿದುಕೊಳ್ಳದೆ, ಅದನ್ನು ಅರ್ಥಮಾಡಿಕೊಳ್ಳುವ ಸಮರ್ಥ ರೀತಿಯಲ್ಲಿ ಅಡಿಗರ ಕಾವ್ಯ ರೂಪುಗೊಳ್ಳುತ್ತದೆ. ಆದ್ದರಿಂದಲೇ ಅಡಿಗರ ನಂತರದ ಕಾವ್ಯ ಏಕಕಾಲಕ್ಕೆ ವೈಯಕ್ತಿಕವೂ ಸಾಮಾಜಿಕವೂ ಆಗಿಬಿಡುತ್ತದೆ.

ಅನ್ಯರೊಳು ಲೋಪದೋಷಗಳ ಬೆದಕಲು ಬೆದರಿ
ತನ್ನೆದೆಯನೇ ಗುಡಿಸಲನುವಾದನು (ಒಳತೋಟಿ)

ಈ ಸ್ವವಿಮರ್ಶೆ ಅಡಿಗರ ಕಾವ್ಯದ ಪ್ರಧಾನವಾದ ಅಂಶ. ತನ್ನನ್ನು ಅರ್ಥಮಾಡಿಕೊಳ್ಳುತ್ತಲೇ ಸಮಾಜವನ್ನೂ, ಬದುಕನ್ನೂ ಅರ್ಥಮಾಡಿಕೊಳ್ಳುವ ಕ್ರಮ-ಅಡಿಗರ ಕಾವ್ಯರೀತಿ. ಅವರ ಆರಂಭದ ಕವಿತೆಗಳನ್ನು ವೈಯಕ್ತಿಕ-ಸಾಮಾಜಿಕ ಕವಿತೆಗಳೆಂದು ಸರಳವಾಗಿ ವಿಭಾಗಿಸುವುದು ಸಾಧ್ಯ. ಆದರೆ ನಂತರದ ಕವಿತೆಗಳು ಈ ರೀತಿಯ ಸರಳ ವಿಂಗಡಣೆಗೆ ಸಿಕ್ಕದಂಥವು.


ಮರೆತುಬಿಡಲೊ ಮಗುವೆ ನಿನ್ನ ಒಲವಿನಂಗಭಂಗವ
ತೆರೆಯೋ ಅಂತರಂಗವ

ಅಲ್ಲಿ ಹುಡುಕು ಕಳಚಿಬಿದ್ದ ನಿನ್ನ ಜೀವರತ್ನವ
ತನ್ನತನದ ಸತ್ವವ

ಸಿಕ್ಕಿರಬಹುದು, ಸಿಕ್ಕದಿದ್ದರೇನು? ಹುಡುಕಾಟವೇ
ಅದರ ದಿವ್ಯಪಾರವೇ

ಎದೆಗೆ ಬಲವ ಮಾತೆಗೆ ಧೃತಿಯ ಬಾಳಿಗೊಂದು ಶಾಂತಿಯ
ನೀಡಬಹುದು ಕಾಂತಿಯ (ಬಿಡುಗಡೆಯ ಹಾಡು)

ಬಗೆ ತೆರೆದು ನೋಡುವ, ತನ್ನತನದ ಸತ್ವವನ್ನು ಕಂಡುಕೊಳ್ಳುವ ಮನೋಭಾವ ಮೊದಲ ಕವಿತೆ ‘ನನ್ನ ನುಡಿ’ಯಲ್ಲಿಯೇ ಪ್ರಕಟವಾಗಿದ್ದರೂ, ಇಲ್ಲಿ ಅದು ಹರಳುಗಟ್ಟುತ್ತದೆ. ಕವಿಗೆ ಇಲ್ಲಿ ಗುರಿಯ ಜೊತೆಗೆ ಪ್ರಕ್ರಿಯೆಯೂ ಮುಖ್ಯ. ಗುರಿಯತ್ತ ಸಾಗುವುದೇ, ಆ ಹುಡುಕಾಟವೇ ಅರ್ಥಪೂರ್ಣವಾದುದೆಂದು ಕವಿ ನಂಬುತ್ತಾರೆ. ಅಡಿಗರ ಮುಂದಿನ ಕಾವ್ಯವೆಲ್ಲ ಆ ‘ಹುಡುಕಾಟವೇ’ ಆಗಿದೆ. ಹೀಗಾಗಿ ಅವರ ಕಾವ್ಯದಲ್ಲಿ ವೈವಿಧ್ಯ ವಿಸ್ತಾರ ಇಲ್ಲದಂತಾಯಿತು. ಆದರೆ ಆಳ ಲಭ್ಯವಾಯಿತು. ಈ ಹಂತದಲ್ಲಿ ಅವರ ಅಂತರಂಗದಲ್ಲಿ ಒಂದು ಬಗೆಯ ಕ್ರಾಂತಿ ನಡೆದು ಅವರ ಕಾವ್ಯ ಸಂಪೂರ್ಣವಾಗಿ ಹೊಸ ರೂಪ ತಾಳಿತು. ಈ ಹಂತದ ಅವರ ಕಾವ್ಯಕಲ್ಪನೆಯನ್ನು ಅಡಿಗರೇ ಹೀಗೆ ವಿವರಿಸಿದ್ದಾರೆ.

೧ ಮೇಲ್ಪದರುಗಳನ್ನಷ್ಟೇ ಒಳಗೊಳ್ಳುವ ಹಾಗೆ ಕಾವ್ಯರಚನೆಯಾದರೆ ಉತ್ತಮ ಕಾವ್ಯ ಸಿದ್ಧಿಸುವುದಿಲ್ಲ. ಪ್ರಜ್ಞೆಯ ಜೊತೆಗೆ ಪ್ರಜ್ಞೆಯ ತಳದಲ್ಲಿ ಅಥವಾ ಅದರ ಮೇಲಕ್ಕೆ ಇರುವ ಎಲ್ಲ ಒಳ ಅಂಶಗಳೂ ಹಠಾತ್ತಾಗಿ ಸೇರಿದರೆ ಉತ್ತಮ ಕಾವ್ಯ ಆಗುತ್ತದೆ. ಇದಕ್ಕೆ ನಿರಂತರ ಶ್ರಮ ಹೇಗೋ ಹಾಗೇ ಅಸಾಧಾರಣವಾದ ತಾಳ್ಮೆಯೂ ತಕ್ಕ ಮುಹೂರ್ತಕ್ಕಾಗಿ ಕಾಯುವುದೂ ಅಗತ್ಯ.

೨. ಸಾಧಿಸಬೇಕಾದದ್ದು ಇತರರಿಗೆ ಮನೋರಂಜಕವಾಗುವ ಅಭಿವ್ಯಕ್ತಿಯನ್ನಲ್ಲ. ತನಗೆ ಅತ್ಯಂತ ಸಜವಾದುದನ್ನು, ಆಡುವ ಮಾತು ಅಂತರನುಭವಾದ ತದ್ರೂಪು ಆಗುವ ಹಾಗೇ, ಕವಿಯ ವ್ಯಕ್ತಿ ವಿಶೇಷವನ್ನು ತೆರೆಯುವ ಹಾಗೆ. 

ಈ ಹಿನ್ನೆಲೆಯಲ್ಲಿ ಕವಿ ವ್ಯಕ್ತಿತ್ವದ ಒಳಹೊರಗುಗಳನ್ನು ಒಂದೇ ಬಿಂದುವಿನಲ್ಲಿ ಹಿಡಿಯುವ ಪ್ರಯತ್ನಕ್ಕೆ ತೊಡಗುತ್ತಾರೆ. 

ಅಡಿಗರ ಕಾವ್ಯದುದ್ದಕ್ಕೂ ಕಂಡುಬರುವ ಪ್ರಧಾನ ಅಂಶಗಳಲ್ಲೊಂದು ಭೂಮಿ ಆಕಾಶಗಳ ಸೆಳೆತಕ್ಕೆ ಸಿಕ್ಕ ಮಾನವನ ಸ್ಥಿತಿ. ಇದು ದೇಹ-ಮನಸ್ಸುಗಳ ಸಂಘರ್ಷವೂ ಹೌದು; ಆದರ್ಶ ವಾಸ್ತವಗಳ ನಡುವಿನ ತಿಕ್ಕಾಟವೂ ಹೌದು. “ಇಲ್ಲಿ ಭೂಮಿಯೆಂದರೆ ಪ್ರಥ್ವಿ ಎಂದಷ್ಟೇ ತಿಳಿಯಬಾರದು. ಇಹ ಇಲ್ಲಿಯದು, ಈ ನಾಗರೀಕತೆ, ಈ ನಾಗರೀಕತೆಯ ಎಲ್ಲ ವಿಪರ್ಯಾಸಗಳನ್ನೂ ಒಳಗೊಂಡದ್ದು ಎಂದು ತಿಳಿಯಬೇಕು.”

ಎತ್ತರೆತ್ತರಕ್ಕೆ ಏರುವ ಮನಕೂ
ಕೆಸರ ಲೇಪ ಲೇಪ
ಕೊಳೆಯ ಕೊಳಚೆಯಲ್ಲಿ ಮುಳುಗಿ ಕಂಡನೋ
ಬಾನಿಗೊಂದು ಪೆಂಪ (ಇದು ಬಾಳು)

ಆದರ್ಶ ಸಾಧನೆಯ ಧ್ರುವತಾರೆಯೊಂದು ಬಾ
ನಂಗಳದಿ ನಿಂತು ಕೈಮಾಡಿ ಕರೆಯುತಿಹುದು
ವಿಷಯ ಸುಖದಾಸೆ ಕಾರ್ಮುಗಿಲಾಗಿ ಹಗೆಯಾಗಿ
ದೃಷ್ಟಿಯನು ನೆಲದೆಡೆಗೆ ದೂಡುತಿಹುದು (ಒಳತೋಟಿ)

ಅನೇಕ ಕವಿತೆಗಳಲ್ಲಿ ಮತ್ತೆ ಮತ್ತೆ ವ್ಯಕ್ತವಾಗುವ ಈ ಸಂಘರ್ಷ, ನೆಲಮುಗಿಲಿನ ಸೆಳೆತ ಸೇ೦ದ್ರಿಯವಾಗಿ ಅಭಿವ್ಯಕ್ತಿ ಪಡೆಯುವುದು ‘ಮೋಹನ ಮುರಲಿ’ ಕವಿತೆಯಲ್ಲಿ. ಅಡಿಗರ ಕಾವ್ಯ ಬೆಳವಣೆಗೆಯಲ್ಲಿ ಇದು ಮುಖ್ಯ ಕವಿತೆ. ಲೌಕಿಕ ಸುಖದಲ್ಲಿ ತೃಪ್ತಿ ಪಡೆದಿದ್ದ ಮನಸ್ಸು ಅಲೌಕಿಕದ ಸೆಳೆತಕ್ಕೆ ಒಳಗಾಗಿರುವ ಚಿತ್ರವನ್ನು ಈ ಕವಿತೆ ಸೊಗಸಾಗಿ ಚಿತ್ರಿಸುತ್ತದೆ. ಇದಿಷ್ಟೇ ಕವಿತೆಯ ಆಶಯವಾಗಿದ್ದರೆ ‘ಮೋಹನ ಮುರಲಿ’ ಮಹತ್ವದ್ದಾಗುತ್ತಿರಲಿಲ್ಲ.

ಇರುವುದೆಲ್ಲವ ಬಿಟ್ಟು ಇರದುರೆಡೆಗೆ ತುಡಿವುದೆ ಜೀವನ 
(ಮೋಹನ ಮುರಲಿ)

ಅಲೌಕಿಕ ಹಂಬಲದ ಉತ್ಕಟ ಕ್ಷಣದಲ್ಲಿಯೇ ಕವಿಗೆ ಈ ಪ್ರಶ್ನೆಯೂ ಮೂಡುತ್ತದೆ. ಇಹದ ಬಿಡುಗಡೆಯ ಸುಖದ ಹಂಬಲವನ್ನು ತೀವ್ರವಾಗಿ ಚಿತ್ರಿಸುವಂತೆಯೇ ಇಲ್ಲಿಯ ‘ಬಂಧನ’ದ ಪ್ರಿಯ ಅನುಭವವನ್ನೂ ಕವಿತೆ ದಟ್ಟವಾಗಿ ಚಿತ್ರಿಸುತ್ತದೆ. ಇವೆರಡರ ಸಂಘರ್ಷದಲ್ಲಿ ಕವಿತೆ ಪ್ರಾಮಾಣಿಕವೂ, ಶೋಧಕವೂ ಆಗುತ್ತದೆ.

ಮುಗಿಲಿನ ಹಂಬಲ ಸಹಜ ನಿಜ. ಈ ಹಂಬಲ ಬದುಕಿನಾಚೆ ಫಲಿಸುವಂಥದಲ್ಲ; ಈ ಬದುಕಿನಲ್ಲೇ ಆವಿಷ್ಕಾರವಾಗಬೇಕಾದುದು-ಇದು ಅಡಿಗರ ನಿಲುವು.

ಮರ್ತ್ಯಜೀವದ ತರುವೊಳುಮರತೆಯ ಫಲ ತನಗೆ
ಸಿಕ್ಕಬೇಕೆಂದವನು ಭಾವಿಸಿದನು (ಒಳತೋಟಿ)

ಮರ್ತ್ಯದಲ್ಲಿಯೇ ಅಮರತೆಯ ಫಲಿಸಬೇಕೆಂಬುದು ಅಡಿಗರ ಕಾವ್ಯದರ್ಶನ. ಆದ್ದರಿಂದಲೇ ಕವಿ ಬಾನಿನೂರಿನಲ್ಲಿ ನೆಲಸಿರುವ ಒಕ್ಕಲನು ಈ ನೆಲಕ್ಕೆ ಆಹ್ವಾಸಿಸುತ್ತಾರೆ (ಅತಿಥಿಗಳು). ಕ್ಷಣ ಬಂದು ಮಿಂಚಿ ಮರೆಯಾಗುವ ಅನೂಹ್ಯ ಅತಿಥಿಗಳನ್ನು ಇಲ್ಲೇ ನೆಲೆನಿಲ್ಲುವಂತೆ ಕೇಳಿಕೊಳ್ಳುತ್ತಾರೆ. ಈ ಮಣ್ಣಿನ ಮನದಲ್ಲಿ ಹೊನ್ನನ್ನು ಬೆಳೆಯಬಲ್ಲಂಥ ಅಪೂರ್ವ ತೇಜದ ಮಾಂತ್ರಿಕರನ್ನು ಕವಿ ಆಹ್ವಾನಿಸುತ್ತಾರೆ.

ಅಡಿಗರ ಈ ಶೋಧನೆ – ಮರ್ತ್ಯದಲ್ಲಿಯೇ ಅಮರತೆಯ ಫಲ ಸಾಧಿಸುವ ಶೋಧನೆ-ಉದ್ದಕ್ಕೂ ಆತ್ಮಶೋಧನೆಯಾಗಿಯೇ ಬೆಳೆಯುತ್ತ ಹೋಗುತ್ತದೆ. ಈ ನೆಲದಲ್ಲಿಯೇ ಹುಟ್ಟಿದ ರಾಮ, ಕೃಷ್ಣ, ಬುದ್ಧ, ಗಾಂಧಿ ದೊಡ್ಡವರಾದರು, ಮಹಾತ್ಮರಾದರು. ನಾನು ಮಾತ್ರ ಹಾಗೆಯೇ ಉಳಿದೆನೇಕೆ?

ನಾನು ಅವನು ಒಂದೆ ಲೋಹ
ಕಬ್ಬಿಣ-ಕರಿ ಕಬ್ಬಿಣ
ಯಾವ ರಸವು ಸೋಂಕಿತವನ?
ಯಾವ ಬೆಂಕಿ ತಾಕಿತವನ?
ಸಾಯುವಾಗ ಎಂಥ ಗಟ್ಟಿ ಚಿನ್ನವಾಗಿ ಸಾಗಿದ;
ನಾನು ಮಾತ್ರ ಆಗ ಹೇಗೋ ಹಾಗೆಯೇ ಈಗಲೂ (ನನ್ನ ಅವತಾರ)

ಕಬ್ಬಿಣ್ಣ ಚಿನ್ನವಾಗಿ ರೂಪುಗೊಂಡ ಬಗೆ ವ್ಯಕ್ತಿತ್ವ ಮಾಗಬೇಕಾದ ರೀತಿಯನ್ನು ಹೇಳುತ್ತದೆ. ಇದು ಹೇಗೆ ಸಾಧ್ಯ? ಯಾವ ಸಿದ್ಧ ಮಾರ್ಗದರ್ಶನವೂ ಈತನ ಸಮಸ್ಯೆಗೆ ಪರಿಹಾರ ಒದಗಿಸುವುದಿಲ್ಲ. ಈತನನ್ನು ಕರೆದುಕೊಂಡು ಹೋಗಬೇಕಾಗಿದ್ದ ರೈಲು ಈತ ಕಾಯುತ್ತಿದ್ದ ನಿಲ್ದಾಣಕ್ಕೆ ಬರುವುದೇ ಇಲ್ಲ. (ಹಿಮಗಿರಿಯ ಕಂದರ) ನಿಲ್ದಾಣಕ್ಕೂ, ರೈಲಿಗೂ ನಡುವೆ ಬಿರುಕು ಬಿಟ್ಟಿದೆ. ಇಂದ್ರಿಯ ಜೀವನಕ್ಕೂ, ಅಲೌಕಿಕದ ಆಕರ್ಷಣೆಗೂ ನಡುವೆ ಬಿರುಕು ಉಂಟಾದ ಸ್ಥಿತಿಯಲ್ಲಿ ಅವನಿಗನ್ನಿಸುತ್ತದೆ –

ಇವಳೆದೆಗೆ ಬೇರಿಳಿದ ಕಾಲು ನನ್ನದು
ಬರಿದೆ ನಕ್ಷತ್ರ ಲೋಕಕ್ಕೂ ರೈಲುಬಿಟ್ಟೆ (ಭೂಮಿಗೀತ)

ಹಿಡಿದ ಗುರಿ ಸಾಧಿಸಬೇಕೆಂಬ ಹಟದಲ್ಲಿ ಕವಿ ಮನಸ್ಸು ಮತ್ತೆ ಮತ್ತೆ ಜಿಜ್ಞಾಸೆಗೊಳಗಾಗುತ್ತದೆ. ತನ್ನ ಇಡೀ ವ್ಯಕ್ತಿತ್ವವನ್ನು ಪಣಕ್ಕೊಡಿ ಕವಿ ಶೋಧನೆಗೆ ತೊಡಗುತ್ತಾರೆ. ಗುರಿ ಸಾಧಿಸಬೇಕಾದರೆ ತನ್ನ ಒಟ್ಟು ವ್ಯಕ್ತಿತ್ವದಲ್ಲೇ, ಒಟ್ಟು ಜೀವನದಲ್ಲೇ ಸಾರ್ಥಕ ಮಾರ್ಪಾಟಾಗಬೇಕು ಎಂಬ ಅರಿವು ಮೂಡುತ್ತದೆ. ಅದಕ್ಕಾಗಿ ಕವಿ ಪ್ರಾರ್ಥಿಸುತ್ತಾರೆ:

ಕಲಿಸು ಬಾಗದೆ ಸೆಟೆವುದನ್ನು, ಬಾಗುವುದನ್ನು
ಹೊತ್ತಿನ ಮುಖಕ್ಕೆ ಶಿಖೆ ಹಿಡಿವುದನ್ನು, ಹಾಗೇ
ಗಾಳಿಗಲ್ಲಾಡಿ ಬಳುಕಾಡಿ ತಾಳುವುದನ್ನೂ
ಈ ಅರಿವು ಅರೆಹೊರೆದ ಮೊಟ್ಟೆ, ದೊರೆ; ಚಿಪ್ಪೊಡೆದು
ಬರಲಿ ಪರಿಪೂರ್ಣಾವತಾರಿ ವಿನತ ಪುತ್ರ (ಪ್ರಾರ್ಥನೆ)

ವಿನತೆಯ ಅವಸರದಲ್ಲಿ ತೊಡೆ ಹೊರೆಯದೆ ಹುಟ್ಟಿದ ಅರ್ಧಾವತಾರಿ ಅರುಣನಂತಾಗದೆ ಪರಿಪೂರ್ಣಾವತಾರಿ ಗರುಡನಂತಾಗಬೇಕೆಂದು ಕವಿಯ ಪ್ರಾರ್ಥನೆ. ಈ ವಿವೇಕದ ಪ್ರಾರ್ಥನೆ ಜೀವನತತ್ವವೂ ಹೌದು; ಕಾವ್ಯ ದರ್ಶನವೂ ಹೌದು. ಅನಂತಮೂರ್ತಿಯವರು ಹೇಳುವ ಹಾಗೆ ‘ಪ್ರಾರ್ಥನೆ’ ಅಡಿಗರ ಒಟ್ಟು ಕಾವ್ಯದ ಮ್ಯಾನಿಫೆಸ್ಟೋ ಎನ್ನಬಹುದು.

ಈ ಪ್ರಾರ್ಥನೆ ಸಾಕಾರವಾಗಲು, ಬದುಕನ್ನು ನಿಜವಾಗಲು – ಪರಂಪರೆಯ ಸತ್ವವನ್ನೂ, ಅಂತಃಶಕ್ತಿಯನ್ನೂ, ಕನಸು-ವಾಸ್ತವಗಳ ಹಠಾತ್ ಸಂಯೋಗವನ್ನೂ ವರ್ತಮಾನದಲ್ಲಿ ಸಾರ್ಥಕಪಡಿಸಿಕೊಳ್ಳಬೇಕಾದ ಅಗತ್ಯವನ್ನು ಕವಿ ಮನಗಾಣುತ್ತಾರೆ. 

ಅಗೆವಾಗ್ಗೆ ಮೊದಲ ಕೋಶಾವಸ್ಥೆ ಮಣ್ಣು
ಕೆಳಕ್ಕೆ ತಳಕ್ಕೆ ಗುದ್ದಲಿಯೊತ್ತಿ ಕುಕ್ಕಿದರೆ
ಕಂಡೀತು ಗೆರೆಮಿರಿವ ಚಿನ್ನದದಿರು
ಹೊರತೆಗೆದು ಸುಟ್ಟು ಸೋಸುವಪರಂಜಿ ವಿದ್ಯೆಗಳ
ಇನ್ನಾದರೂ ಕೊಂಚ ಕಲಿಯಬೇಕು
ಹೊನ್ನ ಕಾಯಿಸಿ ಹಿಡಿದು ಬಡಿದಿಷ್ಟದೇವತಾ
ವಿಗ್ರಹಕ್ಕೊಗಿಸುವ ಅಸಲು ಕಸಬು (ಭೂತ)

“ರೂಢಿಯಾದದ್ದರ ಒಳಹೊಕ್ಕು ಸಿಡಿಮದ್ದಿನ ಹಾಗೆ ಸ್ಫೋಟಿಸಿ ಅದನ್ನು ಅಸ್ತವ್ಯಸ್ತಗೊಳಿಸದೆ ಹೊಸ ಕಾಲದ, ಹೊಸ ಬದುಕಿಗೆ ಅಗತ್ಯವಾದ ಮೌಲ್ಯಗಳನ್ನು ಬೆಳೆಯುವುದು ಸಾಧ್ಯವಾಗುವುದಿಲ್ಲ. ಆದಕಾರಣ ಯಾಂತ್ರಿಕ ವ್ಯವಸ್ಥೆಯಲ್ಲಿ ಸೇರಿದ ನಮ್ಮ ಸಂಸ್ಕೃತಿಯ ಮೌಲ್ಯಗಳ ತಿರುಳನ್ನು ಭೇದಿಸಿ ಮೂಲಬೀಜಗಳನ್ನು ಹೊರತೆಗೆದು ಅದಕ್ಕೆ ಇಂದಿನ ತಕ್ಕ ರೂಪಗಳನ್ನು ಸಿದ್ಧಪಡಿಸುವುದೇ ಬುದ್ಧಿಯ ಮೂಲಕ ಕೆಲಸ ಮಾಡುವವನ ಕರ್ತವ್ಯ”

ಹೀಗೆ ತನ್ನ ಇಷ್ಟದೇವತಾ ವಿಗ್ರಹವನ್ನು ರೂಪಿಸಿಕೊಳ್ಳಲು ಸಹಜವಾಗಿಯೇ ವಿಶೇಷ ಸಾಮರ್ಥ್ಯಬೇಕು, ಶ್ರದ್ಧೆಬೇಕು, ಸಂಕಲ್ಪಬಲ ಬೇಕು. ಸಕಲ್ಪಬಲದಿಂದ ಮಾತ್ರ ವ್ಯಕ್ತಿ ಔನ್ನತ್ಯವನ್ನು ಸಾಧಿಸುವುದು ಸಾಧ್ಯ. ಸಾಮಾನ್ಯವಾಗಿ ಹುಟ್ಟಿದ ರಾಮ ಈ ನೆಲದ ಪ್ರಜ್ಞೆಯನ್ನು ಹೀರಿನಿಂತು ಸಂಕಲ್ಪಬಲದಿಂದ ಉನ್ನತ ಚೇತನವಾಗಿ ಬೆಳೆದುನಿಂತ; ಅಂತರಂಗ ಪರಿವೀಕ್ಷಣೆಯ ಅಗ್ನಿದಿವ್ಯದಲ್ಲಿ ತನ್ನನ್ನು ತಾನು ಕಂಡುಕೊಂಡು ಪುರುಷೋತ್ತಮನಾದ.

ಹುತ್ತಗಟ್ಟದೆ ಚಿತ್ತ ಮತ್ತೆ ಕೆತ್ತೀತೇನು
ಪುರುಷೋತ್ತಮನ ಆ ಅಂಥ ರೂಪರೇಷೆ (ಶ್ರೀರಾಮನವಮಿಯ ದಿವಸ)

ಸಾಮಾನ್ಯ ಮನುಷ್ಯನಾಗಿ ಹುಟ್ಟಿ ಪುರುಷೋತ್ತಮನಾಗಿ ಬೆಳೆದ ರಾಮನ ಬದುಕಿನಲ್ಲಿ, ಆತನ ವ್ಯಕ್ತಿತ್ವ ವಿಕಾಸ ಕ್ರಮದಲ್ಲಿ ಅಡಿಗರಿಗೆ ಆಸಕ್ತಿ; ಕಪಿಚೇಷ್ಟೆಯ ವ್ಯಕ್ತಿ ತನ್ನಲ್ಲೇ ಹತ್ತಿ ಉರಿದು ಹನುಮನ ಚೇತನವನ್ನು ಒಳಗೊಳ್ಳುವುದು ಸಾಧ್ಯವೆಂದು ಅವರ ನಂಬುಗೆ (ವರ್ಧಮಾನ) . ಪ್ರತಿಯೊಬ್ಬ ವ್ಯಕ್ತಿಯೂ ತನಗೆ ತಾನೇ ವಿಕಾಸವಾಗಬೇಕು. ಉನ್ನತ ಚೇತನವಾಗಿ ರೂಪುಗೊಳ್ಳಬೇಕು – ಇದೇ ಅಡಿಗರ ದರ್ಶನ.

“ಅಡಿಗರ ದೃಷ್ಟಿಯಲ್ಲಿ ಸಮಾಜದ ಮೂಲ ಘಟಕ ವ್ಯಕ್ತಿ. ಯಾವ ಬಂಡಾಯವಾಗುವುದಿದ್ದರೂ ಅದು ವ್ಯಕ್ತಿಯಲ್ಲಿ. ಈ ಬಂಡಾಯದ ಕಲ್ಪನೆ ಕೂಡ ವಿಶಿಷ್ಟವಾದದ್ದು. ಸೃಷ್ಟಿಯಲ್ಲಿನ ಪ್ರತಿಯೊಂದು ಚೇತನವೂ ಬೆಲೆಯುಳ್ಳದ್ದು, ಮುಂದೆ ವಿಕಾಸಗೊಂಡು ಪರಿಪೂರ್ಣಾವಸ್ಥೆಗೆ ಸಲ್ಲಬಹುದು ಸ್ವವಿಶಿಷ್ಟವಾದ ಶೀಲದ್ರವ್ಯವೇನನ್ನೋ ಪಡೆದು ಬಂದಿರುವಂಥದ್ದು. ಅದನ್ನು ಕಂಡುಕೊಳ್ಳುವುದೇ, ಬೆಳೆಸಿಕೊಳ್ಳುವುದೇ, ಫಲಾವಸ್ಥೆಗೆ ಮುಟ್ಟಿಸುವುದೇ ಬದುಕಿನ ಗುರಿ. ಅದೇ ನಿಜವಾದ ಸ್ವಸ್ವರೂಪ ದರ್ಶನ, ಆತ್ಮ ಸಾಕ್ಷಾತ್ಕಾರ.”

“ಮಾನವನ ಹೆಚ್ಚಳ ಅವನ ವ್ಯಕ್ತಿತ್ವದ ವಿಕಾಸದಲ್ಲಿದೆ. ಪ್ರತಿಯೊಬ್ಬರ ವ್ಯಕ್ತಿತ್ವ ಬದುಕಲ್ಲಿ ಪ್ರತ್ಯಕ್ಷವಾದರೆ, ಬದುಕಿಗೆ ವಿವಿಧತೆ ಬರುತ್ತದೆ. ಸಮಾಜ ಈ ವ್ಯಕ್ತಿತ್ವದ ಪ್ರತ್ಯಕ್ಷತೆಗೆ ವಿರೋಧವಾಗಿ ಅಡಚಣೆಗಳನ್ನು ಒಡ್ಡುತ್ತಲೇ ಇರುತ್ತದೆ. ಅದಕ್ಕಾಗಿ ಸತತ ಬಂಡಾಯ ಮಾಡಬೇಕು. ಅಲ್ಲದೆ, ಅಡಿಗರ ಮಾಗಿದ ದೃಷ್ಟಿಯಲ್ಲಿ ಕ್ರಾಂತಿ ವೈಯಕ್ತಿಕವಾಗಿಯೇ ಆಗಬೇಕು. ಮಂದೆ ಜೊತೆ-ಕ್ರಾಂತಿ ಮಾಡುವುದು ನಿರರ್ಥಕವಷ್ಟೇ ಅಲ್ಲ, ಅದು ಬೇಕು – ಬೇಡಗಳನ್ನು ದಾಟಿ, ದಬ್ಬಾಳಿಕೆಯಲ್ಲಿ, ಪೀಡಕ ರಾಜ್ಯದಲ್ಲಿ ಕೊನೆಯಾಗುತ್ತದೆ. ಈ ಸತ್ಯ ನಮಗೆ ಕಾಣುವ ಹಾಗೆ, ಸ್ಪರ್ಶದ ಅನುಭವಕ್ಕೆ ಬರುವ ರೀತಿಯಲ್ಲಿ ಅಡಿಗರ ರೂಪಕಗಳಲ್ಲಿ ಅವತರಿಸುತ್ತದೆ. ನಿಜವಾದ ಪ್ರಜಾರಾಜ್ಯದಲ್ಲಿ ಪ್ರತಿಯೊಬ್ಬನಿಗೂ ತನಗೆ ಸಿಕ್ಕ ಸಿಂಹಾಸನವಿದೆ. ಅದನ್ನು ದೊರಕಿಸಿಕೊಳ್ಳಬೇಕು, ದಂಗೆ ಮಾಡಿ, ಚಿನ್ನ, ಮಣ್ಣು ಮರದ್ದಾಗಬಹುದು ಸಿಂಹಾಸನ – ಡೆಮಾಕ್ರಸಿಯಲ್ಲಿ ಪ್ರತಿ ಪ್ರಜೆಯೂ ರಾಜ. ಈ ಅರ್ಥವನ್ನು ಅಡಿಗರು ಎಷ್ಟು ಸೊಗಸಾಗಿ ಚಿತ್ರಿಸುತ್ತಾರೆ.”

ದಂಗೆಯೇಳಬೇಕಾಗುತ್ತಲೇ ಇರುತ್ತದೆ
ತನ್ನೊಳಗೆ ತನ್ನ ನಿಜದ ಸೆಲೆ ಪುಟಿವನಕ (ಬಂಡಾಯ)

ವ್ಯಕ್ತಿತ್ವದ ಸಿದ್ಧಿ ಸಿದ್ಧಿಸುವವರೆಗೆ ಈ ಬಂಡಾಯ ನಿರಂತರ, ಹೋರಾಟ ಅನಿವಾರ್ಯ.

ಅಂತರಂಗದ ಶೋಧನೆಯಂತೆಯೇ ಬಹಿರಂಗದ ತಿಳುವಳಿಕೆಯೂ ವ್ಯಕ್ತಿತ್ವ ವಿಕಾಸದ ಮುಖ್ಯ ಆಯಾಮ. ‘ಪರಿಪೂರ್ಣತೆ’ ಒಳಹೊರಗು’ಗಳ ಸಂಯೋಗದಲ್ಲಿ. ಈ ವೈಯಕ್ತಿಕ – ಸಾಮಾಜಿಕ ಏಕತ್ರ ಬಿಂದುವಿನ ಮತ್ತೊಂದು ಮಜಲು – ‘ಚಿಂತಾಮಣಿಯಲ್ಲಿ ಕಂಡ ಮುಖ’. ‘ಕೂಪ ಮಂಡೂಕ’ದಲ್ಲಿ ತನ್ನೊಳಗಿನ ಚೇತನವನ್ನು ಗೆಳೆಯನೆಂದು ಕರೆದ ಅಡಿಗರು ಅದೇ ಚೇತನವನ್ನು ಇಲ್ಲಿ ಸಭೆಯ ಮಧ್ಯೆ ಸಾಮಾಜಿಕವಾಗಿ ಗುರುತಿಸುತ್ತಾರೆ. ವ್ಯಕ್ತಿತ್ವ ವಿಕಾಸದ ಹಾದಿಯಲ್ಲಿ ತನ್ನ ಮುಖವನ್ನೂ ಹುಡುಕಿಕೊಳ್ಳಬೇಕಾಗುತ್ತದೆ ಎಂಬ ದರ್ಶನ ಅವರ ಕಾವ್ಯ ಬೆಳವಣಿಗೆಯ ಮತ್ತೊಂದು ಮುಖ್ಯ ಹಂತವೆನ್ನಬಹುದು. 

ಇಡೀ ಮಾನವ ಜನಾಂಗದ ಇತಿಹಾಸವನ್ನೂ ಸಮಕಾಲೀನ ಸ್ಥಿತಿಯನ್ನೂ ಭಿತ್ತಿಯಾಗುಳ್ಳ ಅಡಿಗರ ಕಾವ್ಯ ‘ವ್ಯಕ್ತಿತ್ವ ವಿಕಾಸದ ಹೋರಾಟ’ವನ್ನು ಚಿತ್ರಿಸುವ ಮಹಾಕಾವ್ಯವಾಗಿದೆ.
ನರಹಳ್ಳಿ ಬಾಲಸುಬ್ರಮಣ್ಯ