WELCOME

ಈ ಬ್ಲಾಗಿನಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ನನ್ನ ಬರೆಹಗಳ ಜೆಪಿಜಿ ಪ್ರತಿಗಳನ್ನು ಹಂಚಿಕೊಳ್ಳತ್ತೇನೆ.














ಹುಡುಕಿ

Wednesday, January 30, 2013

ಮಾತು ಮುತ್ತು -ಕೆ. ಎಸ್. ನರಸಿಂಹಸ್ವಾಮಿ

ಮಾತು ಬರುವುದು ಎಂದು ಮಾತಾಡುವುದು ಬೇಡ;
ಒಂದು ಮಾತಿಗೆ ಎರಡು ಅರ್ಥವುಂಟು. 
ಎದುರಿಗಿರುವವ ಕೂಡ ಮಾತ ಬಲ್ಲವ ಗೆಳೆಯ;
ಬರಿದೆ ಆಡುವ ಮಾತಿಗರ್ಥವಿಲ್ಲ.

ಕಡಲ ತಟಿಯಲಿ ತರುಣ ಬಲೆಯ ಬೀಸಿದ್ದಾನೆ;
ಮೀನು ಬೀಳುವ ತನಕ ಕಾಯ ಬೇಕು.
ಮೀನ ಹೊರೆಯನು ಹೊತ್ತು ಮನೆಗೆ ಬಂದಿದ್ದಾನೆ;
ಹುಡುಕುತ್ತಲಿಹನವನು ಮುತ್ತಿಗಾಗಿ.

ಮಾತು ಮುತ್ತೆನ್ನುವುದು ಬಲ್ಲವರ ಉಕ್ತಿ; ಬಿಡು.
ಮೀನಿನಿಂದಲು ನಮಗೆ ಲಾಭವುಂಟು.
ಮುತ್ತ ಹುಡುಕಲು ಹೋಗಿ ಮೀನತಂದಿದ್ದಾನೆ.
ಅವನ ದುಡಿಮೆಗೆ ಕೂಡ ಅರ್ಥವುಂಟು.

ಮನೆಗೆ ಬಂದಾಗವನ ಮಡದಿ ಮೆಲ್ಲನೆ ನಕ್ಕು
ಮುತ್ತಕೊಟ್ಟಳು ಅವನ ಹಸಿದ ತುಟಿಗೆ.
ಹೃದಯವನು ಕಲಕಿತ್ತು ಅವಳ ಮೌನದ ಮುತ್ತು.
ಮುತ್ತು ಸಿಕ್ಕಿತು ಎಂದು ನಕ್ಕವನು. 

No comments:

Post a Comment