WELCOME

ಈ ಬ್ಲಾಗಿನಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ನನ್ನ ಬರೆಹಗಳ ಜೆಪಿಜಿ ಪ್ರತಿಗಳನ್ನು ಹಂಚಿಕೊಳ್ಳತ್ತೇನೆ.














ಹುಡುಕಿ

Monday, June 17, 2013

ಪೂರ್ಣಚಂದ್ರ ತೇಜಸ್ವಿ

9-6-2013ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದ 2ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಾಚನ ಮಾಡಿದ ಕವನ

ಪೂರ್ಣಚಂದ್ರ ತೇಜಸ್ವಿ

ಪೂರ್ಣಚಂದ್ರನಿಗೆ ಎಷ್ಟೊಂದು ಕಳೆಗಳು!
ಬರೆವಣಿಗೆ, ಹೋರಾಟ, ಪರಿಸರ, ಬೇಟೆ,
ವಿಜ್ಞಾನ, ಫೋಟೋಗ್ರಫಿ, ಕಂಪ್ಯೂಟರ್, ಗ್ರಾಫಿಕ್ಸ್,...
ಒಂದೆ, ಎರಡೆ!
ಅಪ್ಪನ ಹಾದಿಯ ಬಿಟ್ಟು,
ತನ್ನದೇ ಜಾಡು ಹಿಡಿದು ಹೊರಟ.
ಆನೆ ನಡೆದದ್ದೇ ದಾರಿ!
ಇವ ಬಾಯಿ ತೆರೆದರೆ
ಪತ್ರಕರ್ತರಿಗೆ ಹಬ್ಬ!
ನೇರ ಮಾತು, ಹರಿತ ವಾಗ್ಬಾಣಗಳ ಸುರಿಮಳೆ!
ಪ್ರಶಸ್ತಿ ಸನ್ಮಾನಗಳಿಂದ ಮಾರು ದೂರ!
ಜನಜಂಗುಳಿಯಿಂದ ದೂರವಿದ್ದೂ
ಜನಮಾನಸಕ್ಕೆ ಹತ್ತಿರ!
ನಡುಮಧ್ಯಾಹ್ನ ಹೊಟ್ಟೆಬಿರಿಯೆ ಬಿರಿಯಾನಿ ತಿಂದು,
ನಡುಮನೆಯಿಂದ ಎದ್ದು ಹೇಳದೆ ಕೇಳದೆ ಹೊರಟೇಬಿಟ್ಟ!
ಸದಾ ಬೆರಗು ಹುಟ್ಟಿಸುವ ಸುತ್ತಣ ಮಾಯಾಲೋಕವ ಬಿಟ್ಟು,
ಇನ್ನೊಂದು ಮಾಯಾಲೋಕವ ಅರಸುತ್ತ ಹೊರಟನೆ?
ನಮ್ಮೆಲ್ಲ ಪ್ರಶ್ನೆಗಳಿಗೆ ಉಳಿದದ್ದು ನಿರುತ್ತರ!
ಇವ ಸೃಷ್ಟಿಸಿದ ಪಾತ್ರಗಳು
ನಮ್ಮ ನಡುವೆ ಇನ್ನೂ ಜೀವಂತ.

No comments:

Post a Comment